ಉಡುಪಿ

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ : ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ : ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ,: ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು ಸಾವನ್ನಪ್ಪಿದ 26 ವರ್ಷದ ಮಹಿಳೆಯ ಸಾವಿನ ಕುರಿತಾಗಿ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ.

ಈ ಬಗ್ಗೆ ತನಿಖೆಗೆ ಡಿಎಚ್‌ಒ ನೇತೃತ್ವದ ಸಮಿತಿ ರಚಿಸಲಾಗಿದ್ದು ನಾಲ್ಕು ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ 26 ವರ್ಷದ ರಕ್ಷಾ ಎಂಬ ಮಹಿಳೆ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

“ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ. ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಅವರು ಆರೋಪಿಸಿ ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.

ಇದೀಗ ಈ ಪ್ರಕರಣದ ತನಿಖೆಯನ್ನು ನಡೆಸಿ ನಾಲ್ಕು ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago