ಉಡುಪಿ

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: ಆಸ್ಪತ್ರೆಗೆ ತಲೆ ನೋವಿನಿಂದ ದಾಖಲಾಗಿದ್ದ ಮಹಿಳೆಯೋರ್ವರು ವೈದ್ಯರ ನಿರ್ಲಕ್ಷ್ಯದಿಂದ ಮೃತರಾಗಿದ್ದು ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ತಾಲೂಕಿನ ಇಂದಿರಾ ನಗರದ ಶಿವಪ್ರಸಾದ್ ಎಂಬವರ ಪತ್ನಿ ರಕ್ಷಾ ಎರಡು ಮೂರು ದಿನ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 21 ರ ಬೆಳಿಗ್ಗೆ ಯುವತಿಯನ್ನು ಚಿಕಿತ್ಸೆಗಾಗಿ ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಮನೆಗೆ ವಾಪಾಸ್‌ ಕರೆತರಲಾಗಿತ್ತು. ಆದರೆ, ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆಯನ್ನು ಮನೆಯವರು ಕರೆದಾಗ ಆಕೆ ಯಾವುದೇ ಸ್ಪಂದನೆ ನೀಡಿಲ್ಲ. ತಕ್ಷಣ ಆಕೆಯನ್ನು ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಒಮ್ಮೆಲ್ಲೇ ಸಾವನ್ನಪ್ಪಲು ಮಿಷನ್ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ರಕ್ಷಾ ಅವರ ಕುಟುಂಬ ಸದಸ್ಯರು ದೂರಿದ್ದಾರೆ.

“ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ಆದರೆ, ನಾವು ಮತ್ತೆ ಆಸ್ಪತ್ರೆಗೆ ತೆರಳಿ ಈ ಇಂಜೆಕ್ಷನ್ ಬಗ್ಗೆ ಕೇಳಿದಾಗ, ಆಸ್ಪತ್ರೆಯ ಅಧಿಕಾರಿಗಳು ಸಂಬಂಧಪಟ್ಟ ವೈದ್ಯರು ಇಲ್ಲ ಎಂದು ಹೇಳಿದ್ದಾರೆ. ಆದರ್ಶ ಆಸ್ಪತ್ರೆಯಲ್ಲಿ ರಕ್ಷಾ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ ” ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಸ್ಥಳೀಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಈ ಪ್ರಕರಣದ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ರಕ್ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಆದರೆ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಆಗಿತ್ತು ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮೃತ ದೇಹದ ಅಂತಿಮ ಸಂಸ್ಕಾರದ ವಿಚಾರದಲ್ಲಿ ಗೊಂದಲಗಳು ಉಂಟಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರು ಮತ್ತು ಮೃತರ ಕುಟುಂಬ ಸದಸ್ಯರು ಅಜ್ಜರಕಾಡು ಜಿಲ್ಲಾ ಶವಗಾರಕ್ಕೆ ಆಗಮಿಸಿ ರಕ್ಷಾ ಅವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. “ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಹಾಗೆಯೇ ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಚುಚ್ಚುಮದ್ದು ನೀಡಿದ ವೈದ್ಯರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಕ್ಷಾ ಅವರು ಇಂಧಿರಾನಗರದ ನಿವಾಸಿಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

13 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

13 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

14 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

14 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

14 hours ago