ಉಡುಪಿ

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: -ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು : ಕುಟುಂಬಸ್ಥರ ಆರೋಪ -Vishwanews24

ಉಡುಪಿ: ಆಸ್ಪತ್ರೆಗೆ ತಲೆ ನೋವಿನಿಂದ ದಾಖಲಾಗಿದ್ದ ಮಹಿಳೆಯೋರ್ವರು ವೈದ್ಯರ ನಿರ್ಲಕ್ಷ್ಯದಿಂದ ಮೃತರಾಗಿದ್ದು ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ತಾಲೂಕಿನ ಇಂದಿರಾ ನಗರದ ಶಿವಪ್ರಸಾದ್ ಎಂಬವರ ಪತ್ನಿ ರಕ್ಷಾ ಎರಡು ಮೂರು ದಿನ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 21 ರ ಬೆಳಿಗ್ಗೆ ಯುವತಿಯನ್ನು ಚಿಕಿತ್ಸೆಗಾಗಿ ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಮನೆಗೆ ವಾಪಾಸ್‌ ಕರೆತರಲಾಗಿತ್ತು. ಆದರೆ, ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆಯನ್ನು ಮನೆಯವರು ಕರೆದಾಗ ಆಕೆ ಯಾವುದೇ ಸ್ಪಂದನೆ ನೀಡಿಲ್ಲ. ತಕ್ಷಣ ಆಕೆಯನ್ನು ಮಿಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಒಮ್ಮೆಲ್ಲೇ ಸಾವನ್ನಪ್ಪಲು ಮಿಷನ್ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ರಕ್ಷಾ ಅವರ ಕುಟುಂಬ ಸದಸ್ಯರು ದೂರಿದ್ದಾರೆ.

“ವೈದ್ಯರು ಇಂಜೆಕ್ಷನ್ ನೀಡಿದ ನಂತರ ರಕ್ಷಾ ಪ್ರಜ್ಞೆ ಕಳೆದುಕೊಂಡರು. ಆದರೆ, ನಾವು ಮತ್ತೆ ಆಸ್ಪತ್ರೆಗೆ ತೆರಳಿ ಈ ಇಂಜೆಕ್ಷನ್ ಬಗ್ಗೆ ಕೇಳಿದಾಗ, ಆಸ್ಪತ್ರೆಯ ಅಧಿಕಾರಿಗಳು ಸಂಬಂಧಪಟ್ಟ ವೈದ್ಯರು ಇಲ್ಲ ಎಂದು ಹೇಳಿದ್ದಾರೆ. ಆದರ್ಶ ಆಸ್ಪತ್ರೆಯಲ್ಲಿ ರಕ್ಷಾ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ ” ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಸ್ಥಳೀಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರೂ ಆಗಿರುವ ರಕ್ಷಾ ಅವರ ಪತಿ ಶಿವಪ್ರಸಾದ್, ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಈ ಪ್ರಕರಣದ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ರಕ್ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ಹೇಳಲಾಗಿದೆ. ಆದರೆ ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಆಗಿತ್ತು ಎಂದು ಕೂಡಾ ಹೇಳಲಾಗಿದೆ. ಹಾಗೆಯೇ ಮೃತ ದೇಹದ ಅಂತಿಮ ಸಂಸ್ಕಾರದ ವಿಚಾರದಲ್ಲಿ ಗೊಂದಲಗಳು ಉಂಟಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರು ಮತ್ತು ಮೃತರ ಕುಟುಂಬ ಸದಸ್ಯರು ಅಜ್ಜರಕಾಡು ಜಿಲ್ಲಾ ಶವಗಾರಕ್ಕೆ ಆಗಮಿಸಿ ರಕ್ಷಾ ಅವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. “ಆಸ್ಪತ್ರೆಯ ಅಧಿಕಾರಿಗಳು ರಕ್ಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳುವ ಮೂಲಕ ಸತ್ಯವನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಹಾಗೆಯೇ ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಚುಚ್ಚುಮದ್ದು ನೀಡಿದ ವೈದ್ಯರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಕ್ಷಾ ಅವರು ಇಂಧಿರಾನಗರದ ನಿವಾಸಿಯಾಗಿದ್ದು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago