ಉಡುಪಿ: ಅದಮಾರು ಪರ್ಯಾಯೋತ್ಸವದ ಪ್ರಥಮ ಹೊರೆಕಾಣಿಕೆ ಬುಧವಾರ ಆಗಮಿಸಿತು. ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆಯ ಭಜನಾ ಮಂದಿರಗಳು, ಸಂಘ ಸಂಸ್ಥೆಗಳು, ಅದಮಾರು ವಲಯ ಭಕ್ತವೃಂದ, ಮಟ್ಟುಗುಳ್ಳ ಬೆಳೆಗಾರರ ಸಂಘದಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ವೈಭವದಿಂದ ನೆರವೇರಿತು.
ಭಾವಿ ಪರ್ಯಾಯ ಪೀಠಾಧಿಪತಿ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಮಲ್ಪೆ ಬಂದರಿನಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ನೂರಾರು ಟೆಂಪೋ ಸಹಿತ ವಾಹನಗಳೊಂದಿಗೆ ಮೆರವಣಿಗೆ ಮಲ್ಪೆಯಿಂದ ಜೋಡುಕಟ್ಟೆ, ಕೋರ್ಟ್ ರಸ್ತೆ , ಕೆ.ಎಂ. ಮಾರ್ಗ ಸಂಸ್ಕೃತ ಕಾಲೇಜು ಮಾರ್ಗವಾಗಿ ಹೊರೆಕಾಣಿಕೆ ಸಾಗಿತು.
ವಿವಿಧ ಭಜನಾ ಸಂಘಟನೆ ಮಹಿಳೆಯರು ಸಾಥ್ ನೀಡಿದರು. ಮಲ್ಪೆಯಿಂದ ಸುಮಾರು 10 ಟನ್ ಅಕ್ಕಿ, 3 ಟನ್ ಬೆಲ್ಲ, 5 ಸಾವಿರ ತೆಂಗಿನಕಾಯಿ, ದವಸ ಧಾನ್ಯಗಳು ಹರಿದು ಬಂದಿವೆ. ಮಟ್ಟುಗುಳ್ಳ ಬೆಳೆಗಾರರು ದೋಣಿ ಆಕಾರದ ಗಾಡಿಯಲ್ಲಿ ಮಟ್ಟುಗುಳ್ಳ ತುಂಬಿಸಿ ಮೆರವಣಿಗೆ ನಡೆಸಿದರು. ತಲೆ ಮೇಲೆ ಮಟ್ಟುಗುಳ್ಳ ಬುಟ್ಟಿ ಹೊತ್ತುಕೊಂಡು ಸಾಂಪ್ರದಾಯಿಕವಾಗಿ ಸಾಗಿಬಂದರು.
ಅದಮಾರು ಗ್ರಾಮ ಭಕ್ತ ವೃಂದ ವತಿಯಿಂದಲೂ 10 ಟನ್ ಅಕ್ಕಿ, ದವಸ, ಧಾನ್ಯ, ಬೆಳೆ, ಕಾಳು ಸಮರ್ಪಿಸಲಾಯಿತು. ಶಾಸಕ ಕೆ.ರಘುಪತಿ ಭಟ್, ನಾಡೋಜ ಡಾ.ಜಿ.ಶಂಕರ್, ಹೊರೆಕಾಣಿಕೆ ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಜಲಜಾ ಕೋಟ್ಯಾನ್ ಮೊದಲಾದವರಿದ್ದರು.
ಮೀನುಗಾರರು ಶ್ರಮಜೀವಿಗಳು ಹಾಗೂ ಛಲಗಾರರು. ಮಲ್ಪೆ ಹಾಗೂ ಶ್ರೀಕೃಷ್ಣನಿಗೆ ಅನೋನ್ಯ ಸಂಬಂಧವಿದೆ. ಮೀನುಗಾರರು ಕೃಷ್ಣನ ಸೇವೆಗೆ ಸದಾ ಕಾರ್ಯಪ್ರವೃತ್ತರಾಗುತ್ತಾರೆ. ಎಲ್ಲರೂ ಒಳ್ಳೆಯ ಗುಣಗಳನ್ನು ಸ್ವೀಕರಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕು.
– ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…