ಉಡುಪಿ: ಶನಿವಾರ ಕುಂದಾಪುರದಲ್ಲಿ ಶವ ಅದಲು ಬದಲು ಆದ ಘಟನೆಯ ಬಗ್ಗೆ ರಾಜ್ಯ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿಯವರು ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸಿ ಮಾಹಿತಿ ಪಡೆದರು.
ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕವೇ ಅದನ್ನು ರವಾನೆ ಮಾಡಿ ಎಂದು ಸೂಚನೆ ನೀಡಿದರು. ಹಾಗೆಯೇ ವ್ಯಕ್ತಿಯು ಕೊರೊನಾ ಸೋಂಕಿತರು ಆಗಿರಲಿ, ಆಗಿರದಿರಲಿ ಎಲ್ಲಾ ಸಂದರ್ಭದಲ್ಲೂ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು. ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹ ಬಂದ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಯೊಬ್ಬರು ಸ್ಥಳದಲ್ಲೇ ಇರಬೇಕು ಎಂದು ಹೇಳಿದ್ದಾರೆ.
ಶಾಸಕ ಕೆ ರಘುಪತಿ ಭಟ್ ಅವರು ಸಚಿವ ಬೊಮ್ಮಾಯಿಯವರಿಗೆ ಈ ಸಲಹೆಯನ್ನು ನೀಡಿದರು.
ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಬೇರೆ ವ್ಯಕ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಿದ ಘಟನೆ ಕೋಟೇಶ್ವರದಲ್ಲಿ ಶನಿವಾರ ನಡೆದಿತ್ತು. ಈ ವಿಷಯವು ಅಂತಿಮ ಸಂಸ್ಕಾರ ನಡೆಯಲಿದ್ದ ಕೆಲವೇ ನಿಮಿಷಗಳ ಮೊದಲು ಬೆಳಕಿಗೆ ಬಂದಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…