ಉಡುಪಿ: ಶನಿವಾರ ಕುಂದಾಪುರದಲ್ಲಿ ಶವ ಅದಲು ಬದಲು ಆದ ಘಟನೆಯ ಬಗ್ಗೆ ರಾಜ್ಯ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿಯವರು ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸಿ ಮಾಹಿತಿ ಪಡೆದರು.
ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕವೇ ಅದನ್ನು ರವಾನೆ ಮಾಡಿ ಎಂದು ಸೂಚನೆ ನೀಡಿದರು. ಹಾಗೆಯೇ ವ್ಯಕ್ತಿಯು ಕೊರೊನಾ ಸೋಂಕಿತರು ಆಗಿರಲಿ, ಆಗಿರದಿರಲಿ ಎಲ್ಲಾ ಸಂದರ್ಭದಲ್ಲೂ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು. ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹ ಬಂದ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಯೊಬ್ಬರು ಸ್ಥಳದಲ್ಲೇ ಇರಬೇಕು ಎಂದು ಹೇಳಿದ್ದಾರೆ.
ಶಾಸಕ ಕೆ ರಘುಪತಿ ಭಟ್ ಅವರು ಸಚಿವ ಬೊಮ್ಮಾಯಿಯವರಿಗೆ ಈ ಸಲಹೆಯನ್ನು ನೀಡಿದರು.
ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಬೇರೆ ವ್ಯಕ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಿದ ಘಟನೆ ಕೋಟೇಶ್ವರದಲ್ಲಿ ಶನಿವಾರ ನಡೆದಿತ್ತು. ಈ ವಿಷಯವು ಅಂತಿಮ ಸಂಸ್ಕಾರ ನಡೆಯಲಿದ್ದ ಕೆಲವೇ ನಿಮಿಷಗಳ ಮೊದಲು ಬೆಳಕಿಗೆ ಬಂದಿತ್ತು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…