ಉಡುಪಿ

ಉಡುಪಿ: ವ್ಯಕ್ತಿಯು ಕೊರೊನಾ ಸೋಂಕಿತ ಆಗಿರಲಿ, ಆಗಿರದಿರಲಿ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಉಡುಪಿ: ವ್ಯಕ್ತಿಯು ಕೊರೊನಾ ಸೋಂಕಿತ ಆಗಿರಲಿ, ಆಗಿರದಿರಲಿ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಉಡುಪಿ: ಶನಿವಾರ ಕುಂದಾಪುರದಲ್ಲಿ ಶವ ಅದಲು ಬದಲು ಆದ ಘಟನೆಯ ಬಗ್ಗೆ ರಾಜ್ಯ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿಯವರು ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‌ ನಡೆಸಿ ಮಾಹಿತಿ ಪಡೆದರು.

ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕವೇ ಅದನ್ನು ರವಾನೆ ಮಾಡಿ ಎಂದು ಸೂಚನೆ ನೀಡಿದರು. ಹಾಗೆಯೇ ವ್ಯಕ್ತಿಯು ಕೊರೊನಾ ಸೋಂಕಿತರು ಆಗಿರಲಿ, ಆಗಿರದಿರಲಿ ಎಲ್ಲಾ ಸಂದರ್ಭದಲ್ಲೂ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು. ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹ ಬಂದ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಯೊಬ್ಬರು ಸ್ಥಳದಲ್ಲೇ ಇರಬೇಕು ಎಂದು ಹೇಳಿದ್ದಾರೆ.

ಶಾಸಕ ಕೆ ರಘುಪತಿ ಭಟ್ ಅವರು ಸಚಿವ ಬೊಮ್ಮಾಯಿಯವರಿಗೆ ಈ ಸಲಹೆಯನ್ನು ನೀಡಿದರು.

ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಬೇರೆ ವ್ಯಕ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಿದ ಘಟನೆ ಕೋಟೇಶ್ವರದಲ್ಲಿ ಶನಿವಾರ ನಡೆದಿತ್ತು. ಈ ವಿಷಯವು ಅಂತಿಮ ಸಂಸ್ಕಾರ ನಡೆಯಲಿದ್ದ ಕೆಲವೇ ನಿಮಿಷಗಳ ಮೊದಲು ಬೆಳಕಿಗೆ ಬಂದಿತ್ತು.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago