Featured

ಉಡುಪಿ : ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಿ : ಡಾ.ನಾಗಭೂಷಣ ಉಡುಪ -Vishwanews24

ಉಡುಪಿ : ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಿ : ಡಾ.ನಾಗಭೂಷಣ ಉಡುಪ -Vishwanews24

ಉಡುಪಿ : ಇಂದಿನ ಯುವಜನತೆ ಆರೋಗ್ಯದ ಮಹತ್ವ ಮರೆತು ದುಶ್ಚಟಗಳಿಗೆ ಬಲಿಯಾಗಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳುತ್ತಿದ್ದಾರೆ. ಸಾಂಕ್ರಮಿಕ ಕಾಯಿಲೆಯಷ್ಟೇ ಮಾರಕವಾಗಿರುವ ವಿವಿಧ ವ್ಯಸನಗಳ ಬಗ್ಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.

ಅವರು ಇಂದು ಮಲ್ಪೆಯ ಮೀನುಗಾರರ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಮೀನುಗಾರರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ಸಾಂಕ್ರಾಮಿಕ ರೋಗಗಳು ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಹೊಂದಿರಬೇಕು. ಮೀನುಗಾರರು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು, ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಮಾತನಾಡಿ , ಮೀನುಗಾರರು ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ, ಮಲ್ಪೆಯನ್ನು ಮಲೇರಿಯಾ, ಡೆಂಗ್ಯೂ, ಕಾಲರಾ ಹಾಗೂ ಇನ್ನಿತರ ಸಾಂಕ್ರಾಮಿಕ ಖಾಯಿಲೆಗಳಿಂದ ಹಾಗೂ ತಂಬಾಕು ಮುಕ್ತ ಮಲ್ಪೆಯನ್ನಾಗಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕಿ ಸುಷ್ಮಾ, ಮಣಿಪಾಲನ ಕೆ.ಎಮ್.ಸಿ ವೈದ್ಯ ಡಾ.ಮುರುಳಿಧರ್ ಕುಲಕರ್ಣಿ, ಜಿಲ್ಲಾ ಮಲೇರಿಯಾಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮರಾವ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿದರು, ಮನೋಜ್‌ಕುಮಾರ್ ನಿರೂಪಿಸಿ ವಂದಿಸಿದರು.

Vishwa News 24

Recent Posts

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 hour ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

2 hours ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

2 hours ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

2 hours ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

3 hours ago