Featured

ಉಡುಪಿ : ಶಂಕರಪುರ ಮಲ್ಲಿಗೆ ಹೂವಿನ ಗರಿಷ್ಠ ದರ 1,250 ರೂ. ಗಳಿಂದ 2,100 ರೂ. ಗಳಿಗೆ ಏರಿಕೆ : ಡಿ. 23ರಿಂದ ಜಾರಿಗೆ – Vishwanews24

ಉಡುಪಿ : ಶಂಕರಪುರ ಮಲ್ಲಿಗೆ ಹೂವಿನ ಗರಿಷ್ಠ ದರ 1,250 ರೂ. ಗಳಿಂದ 2,100 ರೂ. ಗಳಿಗೆ ಏರಿಕೆ : ಡಿ. 23ರಿಂದ ಜಾರಿಗೆ – Vishwanews24

ಉಡುಪಿ,: ಉಡುಪಿ ಜಿಲ್ಲೆಯಲ್ಲಿ ಮಲ್ಲಿಗೆ ಕೃಷಿ ಕೂಡಾ ಪ್ರಮುಖವಾದದ್ದು, ಇಲ್ಲಿ ಮಲ್ಲಿಗೆ ಕೃಷಿಯನ್ನೇ ನಂಬಿ ಅನೇಕ ಕುಟುಂಬಗಳು ಜೀವನ ಸಾಗಿಸುತ್ತಿವೆ. ಇದೀಗ ಮಲ್ಲಿಗೆ ದರದಲ್ಲಿ ಏರಿಕೆ ಕಂಡಿದ್ದು ಜಿಲ್ಲಾ ಕೃಷಿಕ ಸಂಘವು ಸಂತಸ ವ್ಯಕ್ತಪಡಿಸಿದೆ.

ಡಿ.23 ರಿಂದ ಅನ್ವಯವಾಗುವಂತೆ ಶಂಕರಪುರದ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಮಲ್ಲಿಗೆ ಹೂವಿನ ದರವನ್ನು ಅಟ್ಟಿಗೆ (3200 ಬಿಡಿ ಹೂವು) 2,100ರೂ.ಗಳಿಗೆ ಏರಿಸಿ ದರ ನಿಗದಿ ಪಡಿಸಿದೆ. ಇದೀಗ ದರ ನಿಗದಿ ಕೇಂದ್ರದ ಕ್ರಮವನ್ನು ಉಡುಪಿ ಜಿಲ್ಲಾ ಕೃಷಿಕ ಸಂಘವು ಸ್ವಾಗತಿಸಿದ್ದು, ಸದ್ಯದ ವಿಪರೀತದ ಹವಾಮಾನ ಸ್ಥಿತಿಯಲ್ಲಿ ಈ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿ ರುವುದರಿಂದ ತೀರಾ ಸಂಕಷ್ಟ ಪರಿಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಪರಿಸ್ಥಿತಿ ಯಲ್ಲಿ ಮಲ್ಲಿಗೆ ಹೂವಿನ ದರ ಏರಿಕೆ ಸಮಂಜಸವಾಗಿದೆ ಎಂದು ಸಂಘ ಅಭಿಪ್ರಾಯ ಪಟ್ಟಿದೆ.

ಅಲ್ಲದೆ ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.

ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುವವರೇ. ಕೃಷಿಕರಿಗಿಂತ ತಮ್ಮ ಹಿತಾಸಕ್ತಿಗಾಗಿ ಕೃಷಿಕರನ್ನು ಬಳಸಿಕೊಳ್ಳುತ್ತಾರೆ. ಇಂತಹವರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರ ಮಾತ್ರ ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ ಎಂದು ಸಂಘವು ಬೆಲೆ ಏರಿಕೆ ಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago