ಉಡುಪಿ :“ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ”(ಎಸ್ಎಎಸ್ಎಸ್) ಇದರ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹಾಗೂ ರಾಜ್ಯಾಧ್ಯಕ್ಷ ಡಾ.ಜಯರಾಂ ಅವರ ನಿರ್ದೇಶನದ ಮೇರೆಗೆ, ಉಡುಪಿ ಜಿಲ್ಲಾ ಎಸ್ಎಎಸ್ಎಸ್ ಮಹಿಳಾ ಘಟಕವನ್ನು ರಚಿಸಲಾಗಿದ್ದು, ಇದರ ಜಿಲ್ಲಾ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಇವರನ್ನು ನಿಯೋಜಿಸಲಾಗಿದೆ.
ಎಸ್ಎಎಸ್ಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ರವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಇದೇ ತಿಂಗಳ ಡಿಸೆಂಬರ್ 31 ನೇ ತಾರೀಕಿನಂದು ಭಾನುವಾರ, ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ, ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ ಮತ್ತು ತಾಲೂಕು ,ಹಾಗೂ ಶ್ರೀ ಅಯ್ಯಪ್ಪ ಮಂದಿರ (ರಿ) ಮಲ್ಪೆ ಇದರ ಜಂಟಿ ಆಶ್ರಯದೊಂದಿಗೆ ಮಲ್ಪೆಯ ಅಯ್ಯಪ್ಪ ಮಂದಿರ ವಠಾರದಲ್ಲಿ ನಡೆಯಲಿರುವ “ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಸಮಾವೇಶ” ಮತ್ತು “ಹರಿವರಾಸನಂ ಶತಮಾನೋತ್ಸವ” ಆಚರಣೆಯ ಸಮಾರಂಭದ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಹಿಳಾ ಎಸ್ಎಎಸ್ಎಸ್ ನ ಪದಗ್ರಹಣ ಕಾರ್ಯಕ್ರಮವು ನೆರವೇರಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…