Featured

ಉಡುಪಿ: ಶರಣಾಗತಿ ನಿಮಗಿರುವ ಒಂದೇ ಒಂದು ದಾರಿ : ನಕ್ಸಲರಿಗೆ ಡಿಜಿಪಿ ಪ್ರಣಬ್ ಮೊಹಂತಿ ಎಚ್ಚರಿಕೆ – vishwanews24

ಉಡುಪಿ: ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ : ನಕ್ಸಲರಿಗೆ ಡಿಜಿಪಿ ಪ್ರಣಬ್ ಮೊಹಂತಿ ಎಚ್ಚರಿಕೆ

ಉಡುಪಿ: ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ  ಅವರು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ರವಾನಿಸಿದ್ದಾರೆ.

ಎನ್‌ಕೌಂಟರ್ ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ, ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ. ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎಎನ್‌ಎಫ್ ಕ್ಯಾಂಪ್‌ಗೆ ಭೇಟಿಕೊಟ್ಟು ಕೆಲ ಸೂಚನೆ ನೀಡಿರುವ ನೀಡಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ  ಎನ್‌ಕೌಂಟರ್ ಪ್ರಕರಣಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್‌ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.

ಪೀತಬೈಲು ಘಟನಾ ಸ್ಥಳದಲ್ಲಿರುವ ಎಲ್ಲಾ ಮಹತ್ವದ ದಾಖಲೆಗಳನ್ನು ಎಫ್‌ಎಸ್‌ಎಲ್ ತಂಡ ಪರಿಶೀಲಿಸುತ್ತಿದೆ. ಎನ್‌ಕೌಂಟರ್ ಪ್ರಕರಣದಲ್ಲಿ ಖಚಿತ ದಾಖಲೆ ಸಂಗ್ರಹ ಮತ್ತು ಸಾಕ್ಷ್ಯಾಧಾರ ಹೋಲಿಕೆಗಾಗಿ ಎರಡು ಬಾರಿ ಎಫ್‌ಎಸ್‌ಎಲ್ (FSL) ತಂಡದಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

35 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

45 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago