Featured

ಉಡುಪಿ: ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ – vishwanews24

ಶರಣಾದ ನಕ್ಸಲ್​ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ

ಲಕ್ಷ್ಮೀ ಪ್ರಸ್ತುತ ಆಂಧ್ರಪ್ರದೇಶದಲ್ಲಿ ನೆಲೆಸಿದ್ದ ಕುಂದಾಪುರ ಮೂಲದವಳು

ಉಡುಪಿ: ಲಕ್ಷ್ಮೀ 2006ರಿಂದ ಕಣ್ಮರೆಯಾಗಿದ್ದು, ಆಕೆಯ ವಿರುದ್ಧ ಅಂದಿನ ಶಂಕರನಾರಾಯಣ (ಇಂದಿನ ಅಮಾಸೆಬೈಲು) ಠಾಣೆಯಲ್ಲಿ 2007ರಲ್ಲಿ ಗುಂಡಿನ ದಾಳಿ ನಡೆಸಿದ್ದು, ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದು ಹಾಗೂ ಭಿತ್ತಿಪತ್ರ, ಕರಪತ್ರಗಳನ್ನು ಅಂಟಿಸಿದ ಒಟ್ಟು 3 ಪ್ರಕರಣಗಳು ದಾಖಲಾಗಿವೆ ಎಂದು ಅವರು ವಿಚಾರಣೆ ಬಾಕಿ ಇವೆ. ಆಕೆ ನೆಲೆಸಿರುವ ಆಂಧ್ರಪ್ರದೇಶದಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌ಪಿ ಡಾ| ಅರುಣ್‌ ತಿಳಿಸಿದ್ದಾರೆ.

ಶರಣಾಗತಿ ಪ್ರಕ್ರಿಯೆಯ ವೇಳೆ ಎಸ್‌ಪಿ ಡಾ| ಕೆ. ಅರುಣ್‌, ಹೆಚ್ಚುವರಿ ಎಸ್ಪಿ ಎಸ್‌.ಟಿ. ಸಿದ್ಧಲಿಂಗಪ್ಪ, ಎಎನ್‌ಎಫ್ ಇನ್‌ಸ್ಪೆಕ್ಟರ್‌ ಸತೀಶ್‌ ಕಾನೂನು ಪ್ರಕ್ರಿಯೆ ಪೂರೈಸಿದರು. ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

ವೈದ್ಯಕೀಯ ಪರೀಕ್ಷೆ
ಶರಣಾಗತಿ ಪ್ರಕ್ರಿಯೆ ಬಳಿಕ ಕುಂದಾಪುರ ಡಿವೈಎಸ್ಪಿ ಎಚ್‌.ಡಿ. ಕುಲಕರ್ಣಿ ನೇತೃತ್ವದ ಪೊಲೀಸ್‌ ತಂಡವು ಜಿಲ್ಲಾಸ್ಪತ್ರೆಯಲ್ಲಿ ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ ನಡೆಸಿ, ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಲಾಯಿತು. ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಫೆ. 3ರಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸುವಂತೆ ನ್ಯಾಯಾಧೀಶರು ತಿಳಿಸಿದರು.

ಸಮಸ್ಯೆ ಬಗ್ಗೆ ಗಮನ ಹರಿಸಲಾಗುವುದು: ಡಿ.ಸಿ.
ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ರಾಜ್ಯ ಸರಕಾರದ‌ ಆದೇಶದಂತೆ ಶರಣಾಗತಿ ಪ್ಯಾಕೇಜ್‌ ನೀಡಲಾಗುತ್ತಿದೆ. 3 ಕೆಟಗರಿಯಲ್ಲಿ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಇದೆ. ಈಕೆ ನಮ್ಮ ರಾಜ್ಯದವಳಾಗಿದ್ದರಿಂದ ಎ ಶಿಫಾರಸು ಮಾಡಿದ್ದೇವೆ. ಪುನರ್ವಸತಿ ಹಾಗೂ ಕೌಶಲ ತರಬೇತಿ, ಶಿಕ್ಷಣ ನಡೆಸಲು ಅವಕಾಶ ಇದೆ. ಲಕ್ಷ್ಮಿಯ ಊರಿನ ಮೂಲಸೌಕರ್ಯಗಳ ಬಗ್ಗೆ ಗಮನಹರಿಸಲಾಗುವುದು ಎಂದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago