Featured

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.

ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.

ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

17 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago