ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.
ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.
ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…