ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.
ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.
ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…