ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.
ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.
ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…