Featured

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿದ ಆರೋಪ ; SPDI ಮುಖಂಡರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಡಿ.10ರಂದು ಹಮ್ಮಿಕೊಳ್ಳಲಾದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಕಾರ್ಯಕ್ರಮಕ್ಕೆ ಸಂಬಂಧಿಸಿ ಪತ್ರಿಕಾಗೋಷ್ಠಿ ನಡೆಸಿ ಶಾಂತಿ ಕದಡುವ ವಿಡಿಯೋ ಮಾಡಿದ ಆರೋಪದಡಿ ಎಸ್ ಡಿ ಪಿ ಐ ಮುಖಂಡರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಎಸ್ ಡಿಪಿಐ ಮುಖಂಡರಾದ ಭಾಸ್ಕರ ಪ್ರಸಾದ್, ಶಾಹೀದ್ ಅಲಿ, ಅಪ್ಸರ್ ಕೊಡ್ಲಿಪೇಟೆ, ರಿಯಾಝ್ ಕಡುಂಬು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ‘ನಾವು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆನಮತಿ ಕೇಳಿಲ್ಲ, ಕೇವಲ ಮಾಹಿತಿಯನ್ನು ನೀಡಿದ್ದು, ಅವರು ಬಂದೋಬಸ್ತ್ ಕೊಡದೇ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆʼ ಎಂದು ಶಾಂತಿ ಕದಡುವ ವಿಡಿಯೋ ವೈರಲ್ ಮಾಡಿರುವುದಾಗಿ ದೂರಲಾಗಿದೆ.

ಇವರು ಸಾರ್ವಜನಿಕವಾಗಿ ಹೇಳಿಕೆಯನ್ನು ನೀಡಿ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಹರಿ ಬಿಟ್ಟು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತೆ ಮಾಡಲು ಪ್ರಚೋದನೆ ನೀಡಿರುವುದು ಕಂಡು ಬಂದಿದೆ ಎಂದು ದೂರದಲ್ಲಿ ತಿಳಿಸಲಾಗಿದೆ.

ಅದರಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ನೀಡಿದ ದೂರಿನಂತೆ ಬಿಎನ್ ಎಸ್ ಯು/ಎಸ್ 189, 62, 353(2) ರಂತೆ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

27 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

1 hour ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

2 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

2 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago