Featured

ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿಸಿ  ಕೋಟ್ಯಂತರ ರೂ. ವಂಚನೆ ಪ್ರಕರಣ: ಇಬ್ಬರ ಬಂಧನ – vishwanews24

ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿಸಿ  ಕೋಟ್ಯಂತರ ರೂ. ವಂಚನೆ ಪ್ರಕರಣ: ಇಬ್ಬರ ಬಂಧನ

ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಉಡುಪಿ ಎಸ್ಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್.(33) ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದು ಎಸ್ಪಿ ತಿಳಿಸಿದರು.

2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕ ವಿಮಾ ಪರಿಹಾರವಾಗಿ 15,95,000ರೂ. ಹಣ ಕೋರಿಕೊಂಡಿದ್ದರು.

ಈ ಸಂಬಂಧ ವಿಮಾ ಕಂಪೆನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ಆಗಿರುವುದು ಕಂಡುಬಂದಿದೆ. ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ನೇತೃತ್ವದಲ್ಲಿ ಕೋಟ ಪೊಲೀಸ್ ಠಾಣೆಯ ಎಸ್ಸೈ ಪ್ರವೀಣ ಕುಮಾರ್ ಅವರನ್ನು ಒಳಗೊಂಡ ವಿಶೇಷ ತಂಡ ತನಿಖೆ ನಡೆಸಿದಾಗ ಈ ವಂಚನೆ ಪ್ರಕರಣ ಬೆಳಕಿಗೆ ಬಂತು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಶಾಲಾ ಕಾಲೇಜು ಬಸ್‌ಗಳೇ ಟಾರ್ಗೆಟ್

ತನಿಖಾ ತಂಡವು ಸೆ.6ರಂದು ಪ್ರಕರಣದ ಆರೋಪಿ ರಾಕೇಶ್‌ನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿ ಯಲ್ಲಿ ಎಸ್‌ಡಿಓ ಆಗಿದ್ದ ಚರಣ ಬಾಬು ಮೇಸ್ತನ ಜೊತೆ ಸೇರಿಕೊಂಡು ಕುಂದಾಪುರ, ಕೋಟ, ಬ್ರಹ್ಮಾವರ, ಶಿರೂರು, ಭಟ್ಕಳಗಳಲ್ಲಿನ ಶಾಲೆ ಹಾಗೂ ಕಾಲೇಜಿನ ಬಸ್ಸಿಗೆ ವಿಮೆ ಪಾಲಿಸಿ ಮಾಡುವುದಾಗಿ ನಂಬಿಸಿ ನಕಲಿ ವಿಮೆ ಪಾಲಿಸಿಯನ್ನು ಮಾಡಿ ಮೋಸ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಅದರಂತೆ ಚರಣ ಬಾಬು ಮೇಸ್ತನನ್ನು ಪೊಲೀಸರು ಅ.3ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆ ಬಗ್ಗೆ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಭಟ್ಕಳ ಹಾಗೂ ಉಡುಪಿ ಕಡೆಗಳ ಲ್ಲಿಯ ಖಾಸಗಿ/ಅನುದಾನಿತ ಶಾಲಾ ಕಾಲೇಜಿನಲ್ಲಿ ಶಾಲಾ ಬಸ್ಸಿನ ವಿಮೆ ಮಾಡಿಸುವುದಾಗಿ ಹಣ ಪಡೆದು ಇದೇ ರೀತಿಯ ಕೃತ್ಯವೆಸಗಿರುವುದು ತಿಳಿದು ಬಂದಿದೆ.

ಶಾಲಾ ವಾಹನಗಳಲ್ಲಿ ಮಕ್ಕಳು ಇರುವುದರಿಂದ ಬಸ್ ನಿಧಾನವಾಗಿಯೇ ಚಲಿಸುತ್ತದೆ ಮತ್ತು ಈ ಬಸ್‌ಗಳು ಅಪಘಾತಕ್ಕೆ ಒಳಗಾಗುವುದು ಬಹಳಷ್ಟು ವಿರಳ ಎಂಬುದಾಗಿ ತಿಳಿದು ಆರೋಪಿಗಳು ಶಾಲಾ ಕಾಲೇಜು ವಾಹನ ಗಳನ್ನೇ ಗುರಿಯಾಗಿರಿಸಿಕೊಂಡು ನಕಲಿ ವಿಮೆ ಮಾಡಿದ್ದಾರೆ ಎಂದು ಎಸ್ಪಿ ತಿಳಿಸಿದರು.

46 ಶಾಲಾ ಕಾಲೇಜುಗಳಿಗೆ ವಂಚನೆ

ಉತ್ತರ ಕನ್ನಡ ಜಿಲ್ಲೆ ಭಟ್ಕಳ, ಉಡುಪಿ ಜಿಲ್ಲೆಯ ಕುಂದಾಪುರ, ಕೋಟ ಠಾಣಾ ವ್ಯಾಪ್ತಿಯಲ್ಲಿರುವ ಶಾಲೆ/ಕಾಲೇಜಿನ ಶಾಲಾ ಬಸ್ಸಿಗೆ ವಿಮೆ ಮಾಡಿಸುವುದಾಗಿ ಆರೋಪಿಗಳು ಸೇರಿ ಸುಮಾರು 86 ಪಾಲಿಸಿಗಳಲ್ಲಿ 29 ಪಾಲಿಸಿ ನಕಲಿ ಹಾಗೂ 2ನೇ ಆರೋಪಿತ ಒಬ್ಬನೇ 111 ಪಾಲಿಸಿಯಲ್ಲಿ 17 ನಕಲಿ ಪಾಲಿಸಿ ಮಾಡಿ ಒಟ್ಟು 46 ಶಾಲೆ/ಕಾಲೇಜು ವಾಹನಗಳ ವಿಮೆಯನ್ನು ನಕಲಿ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ.

ಆರೋಪಿಗಳು ಈ ಹಿಂದೆ ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿಯಲ್ಲಿ ಕೆಲಸ ಮಾಡಿರುವುದರಿಂದ ಹಳೆ ಪಾಲಿಸಿಗಳನ್ನು ಪಿಡಿಎಫ್ ಪೈಲ್ ಮಾಡಿ ಕಂಪ್ಯೂಟರನಲ್ಲಿ ಸಂಗ್ರಹಿಸಿ ಪಿಡಿಎಫ್ ಎಡಿಟರ್ ಆ್ಯಪ್ ಮೂಲಕ ವಿಮೆ ಪಾಲಿಸಿಯಲ್ಲಿ ವಿಮೆ ನಂಬ್ರ, ದಿನಾಂಕ, ವಾಹನದ ನಂಬ್ರ ಮತ್ತು ವಿಮೆ ಮೊತ್ತದ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ಎಡಿಟ್ ಮಾಡಿ ವಿಮೆ ಪಾಲಿಸಿ ಮಾಡಲು ನೀಡಿದ ಶಾಲಾ /ಕಾಲೇಜಿಗೆ ಕಳುಹಿಸಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago