ಉಡುಪಿ: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ.
ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ.
ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು. ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…