Featured

ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಸಾವು – vishwanews24

ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಸಾವು

ಮಣಿಪಾಲ : ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಅಲ್ವಿನ್ ಡಿಸೋಜಾ (53) ಮೃತ ವ್ಯಕ್ತಿ. ಅಪಘಾತದ ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಘಟನೆಯಲ್ಲಿ ಗಾಯಗೊಂಡಿರುವ ಇತರ ಐವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ವಿದ್ಯಾರ್ಥಿ ಇನ್ನೂ ಚಿಕಿತ್ಸೆ ಮುಂದುವರಿದಿದೆ.

ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಈ ಘಟನೆ ನಡೆದಿದ್ದು ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಹೃದಯಾಘಾತ ಸಂಭವಿಸಿದಾಗ ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದ್ದರು ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಗಾಯಗೊಂಡ ವಿದ್ಯಾರ್ಥಿಗಳನ್ನು ಮತ್ತು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ದುರಾದೃಷ್ಟವಶಾತ್ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

18 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

40 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

46 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago