ಉಡುಪಿ: ಶಾಲೆಗಳಲ್ಲಿ ಸಾಮೂಹಿಕವಾಗಿ ಮೊಟ್ಟೆ ವಿತರಣೆ ಮಾಡಿದರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ : ಪೇಜಾವರ ಸ್ವಾಮೀಜಿ – Vishwanews24
ಉಡುಪಿ: ಶಾಲೆಗಳಲ್ಲಿ ಸಾಮೂಹಿಕವಾಗಿ ಮೊಟ್ಟೆ ವಿತರಣೆ ಮಾಡಿದರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ : ಪೇಜಾವರ ಸ್ವಾಮೀಜಿ – Vishwanews24
ಉಡುಪಿ: ಪರಂಪರೆಯಿಂದ ರೂಢಿಸಿಕೊಂಡು ಬಂದಿರುವ ಆಹಾರ ಪದ್ಧತಿಯನ್ನು ಸರ್ಕಾರ ಬದಲಿಸಬಾರದು. ಶಾಲೆಗಳಲ್ಲಿ ಸಾಮೂಹಿಕವಾಗಿ ಮೊಟ್ಟೆ ವಿತರಣೆ ಮಾಡಿದರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶ್ರೀಗಳು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಸರ್ಕಾರ ಮೊಟ್ಟೆ ಕೊಡುವ ಬದಲು ನೇರವಾಗಿ ಹಣ ನೀಡಿದರೆ, ಯಾರಿಗೆ ಏನು ಬೇಕು ಅದನ್ನು ಖರೀದಿಸಿ ತಿನ್ನುತ್ತಾರೆ. ಶಿಕ್ಷಣ ನೀಡಲು ಇರುವ ಶಾಲೆಗಳಲ್ಲಿ ಮಕ್ಕಳ ಜೀವನ ಶೈಲಿ ಬದಲಿಸುವ ಕೆಲಸಕ್ಕೆ ಕೈಹಾಕಬಾರದು. ಮಕ್ಕಳಲ್ಲಿ ಮತಬೇಧ ಸೃಷ್ಟಿಸಬಾರದು ಎಂದು ಸ್ವಾಮೀಜಿ ಹೇಳಿದರು.
ಮಂಗಳೂರು: ಪಾರ್ಟ್ ಟೈಮ್ ಜಾಬ್ ಆಮಿಷ : ಲಿಂಕ್ ಕಳುಹಿಸಿ 5.31 ಲಕ್ಷ ರೂ. ವಂಚನೆ – Vishwanews24
