ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆಕೆಯೇ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗುತ್ತಿದೆ.
ಚೆನ್ನೈ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಐಟಿ ಸಂಸ್ಥೆಯ ಹಿರಿಯ ಸಲಹೆಗಾರೆಯಾಗಿರುವ ರೆನೆ ಜೋಶಿಲ್ಡಾ ಎಂಬಾಕೆ ಹುಸಿ ಇ-ಮೇಲ್ ಐಡಿ ಮತ್ತು ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳನ್ನು ಬಳಸಿ ಈ ಬೆದರಿಕೆ ಇ-ಮೇಲ್ಗಳನ್ನು ಕಳುಹಿಸಿದ್ದಳು. ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ದೆಹಲಿ, ಕೇರಳ, ಬಿಹಾರ, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳಾದ್ಯಂತ ಈ ಇ-ಮೇಲ್ಗಳನ್ನು ಕಳುಹಿಸಿದ್ದು ಪತ್ತೆಯಾಗಿದೆ.
ಆರೋಪಿ ಮಹಿಳೆಯು ಈ ಸಂಸ್ಥೆಗಳಿಗೆ ಒಟ್ಟು 21 ಬೆದರಿಕೆ ಇ-ಮೇಲ್ಗಳನ್ನು ಕಳುಹಿಸಿರುವುದಾಗಿ ಪತ್ತೆಹಚ್ಚಲಾಗಿದೆ.
ಆರೋಪಿ ನಕಲಿ ಇ-ಮೇಲ್ ಐಡಿಗಳನ್ನು, ವಿಪಿಎನ್ಗಳನ್ನು, ವರ್ಚುವಲ್ ಸಂಖ್ಯೆಗಳನ್ನು ಮತ್ತು ಡಾರ್ಕ್ ವೆಬ್ ಪರಿಕರಗಳನ್ನು ಬಳಸಿ ಬಾಂಬ್ ಬೆದರಿಕೆ ಇ-ಮೇಲ್ಗಳನ್ನು ಕಳುಹಿಸಿ ಬೆದರಿಸುವ ಮತ್ತು ಆತಂಕವನ್ನು ಸೃಷ್ಟಿಸುವ ಪ್ರಯತ್ನ ನಡೆಸಿದ್ದಳು. ಸರ್ಖೇಜ್ನ ಜಿನೇವಾ ಲಿಬರಲ್ ಶಾಲೆಗೆ ಬಂದ ಬೆದರಿಕೆ ಇ-ಮೇಲ್ ಕುರಿತು ವಿಷ್ಣುಭಾಯಿ ಚಮನ್ಭಾಯಿ ಖಖಾಡಿಯಾ ಅವರು ನೀಡಿದ ದೂರಿನನ್ವಯ, ಸೈಬರ್ ಅಪರಾಧ ವಿಭಾಗದ ತಂಡಗಳು ಜಂಟಿ ಪೊಲೀಸ್ ಆಯುಕ್ತರಾದ ಶರದ್ ಸಿಂಘಾಲ್, ಡಿಸಿಪಿ ಡಾ. ಲವಿನಾ ಸಿನ್ಹಾ ಮತ್ತು ಎಸಿಪಿ ಹಾರ್ದಿಕ್ ಮಕಾಡಿಯಾ ಅವರ ನೇತೃತ್ವದಲ್ಲಿ ತನಿಖೆಯನ್ನು ಪ್ರಾರಂಭಿಸಿದವು.
ಜೂನ್ 3, 2025 ರಂದು ಬೆಳಿಗ್ಗೆ 10:58 ಕ್ಕೆ divijprabhakaraO@gmail.com ನಿಂದ ಈ ಇ-ಮೇಲ್ ಬಂದಿತ್ತು.
ಸೈಬರ್ ಕ್ರೈಂ ಬ್ರಾಂಚ್ ಮಾನವ ಗುಪ್ತಚರ ಮತ್ತು ಸೈಬರ್ ಪರಿಕರಗಳನ್ನು ಒಳಗೊಂಡಂತೆ ಸಂಪೂರ್ಣ ತಾಂತ್ರಿಕ ವಿಶ್ಲೇಷಣೆ ನಡೆಸಿತು. ಇದರಿಂದಾಗಿ ತಮಿಳುನಾಡಿನ ಚೆನ್ನೈನಲ್ಲಿ ವಾಸವಾಗಿರುವ ಆರೋಪಿ ರೆನೆ ಜೋಶೀಲ್ಡಾಳನ್ನು ಪತ್ತೆಹಚ್ಚಲು ಸಹಾಯವಾಯಿತು. ನಿಖರ ಪುರಾವೆಗಳನ್ನು ಸಂಗ್ರಹಿಸಿದ ನಂತರ, ಚೆನ್ನೈಗೆ ತಂಡವನ್ನು ಕಳುಹಿಸಲಾಗಿತ್ತು. ಅಲ್ಲಿ ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಲಾಯಿತು. ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.
ಈ ಬಂಧನದ ಕುರಿತು ಪ್ರತಿಕ್ರಿಯಿಸಿದ ಉಡುಪಿ ಎಸ್ಪಿ ಹರಿರಾಮ್ ಶಂಕರ್, “ಆರೋಪಿಯನ್ನು ತನಿಖೆಗಾಗಿ ನಮಗೆ ಹಸ್ತಾಂತರಿಸುವಂತೆ ಅಹಮದಾಬಾದ್ ಪೊಲೀಸರಿಗೆ ನಾವು ಬರೆಯುತ್ತೇವೆ. ಅಹಮದಾಬಾದ್ ಪೊಲೀಸರ ತನಿಖೆ ಮುಗಿದ ನಂತರ ಆಕೆಯನ್ನು ನಮಗೆ ಹಸ್ತಾಂತರಿಸುವ ನಿರೀಕ್ಷೆಯಿದೆ” ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…