Featured

ಉಡುಪಿ : ಶಾಲೆಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಕರೆ ; ಅಹಮದಾಬಾದ್‌ನಲ್ಲಿಆರೋಪಿ ಮಹಿಳೆ ಪೊಲೀಸ್ ವಶಕ್ಕೆ – vishwanews24

ಉಡುಪಿ : ಶಾಲೆಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಕರೆ ; ಅಹಮದಾಬಾದ್‌ನಲ್ಲಿಆರೋಪಿ ಮಹಿಳೆ ಪೊಲೀಸ್ ವಶಕ್ಕೆ

ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆಕೆಯೇ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗುತ್ತಿದೆ.

ಚೆನ್ನೈ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಐಟಿ ಸಂಸ್ಥೆಯ ಹಿರಿಯ ಸಲಹೆಗಾರೆಯಾಗಿರುವ ರೆನೆ ಜೋಶಿಲ್ಡಾ ಎಂಬಾಕೆ ಹುಸಿ ಇ-ಮೇಲ್ ಐಡಿ ಮತ್ತು ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ಬಳಸಿ ಈ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಳು. ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ದೆಹಲಿ, ಕೇರಳ, ಬಿಹಾರ, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳಾದ್ಯಂತ ಈ ಇ-ಮೇಲ್‌ಗಳನ್ನು ಕಳುಹಿಸಿದ್ದು ಪತ್ತೆಯಾಗಿದೆ.

ಆರೋಪಿ ಮಹಿಳೆಯು ಈ ಸಂಸ್ಥೆಗಳಿಗೆ ಒಟ್ಟು 21 ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿರುವುದಾಗಿ ಪತ್ತೆಹಚ್ಚಲಾಗಿದೆ.

ಆರೋಪಿ ನಕಲಿ ಇ-ಮೇಲ್ ಐಡಿಗಳನ್ನು, ವಿಪಿಎನ್‌ಗಳನ್ನು, ವರ್ಚುವಲ್ ಸಂಖ್ಯೆಗಳನ್ನು ಮತ್ತು ಡಾರ್ಕ್ ವೆಬ್ ಪರಿಕರಗಳನ್ನು ಬಳಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿ ಬೆದರಿಸುವ ಮತ್ತು ಆತಂಕವನ್ನು ಸೃಷ್ಟಿಸುವ ಪ್ರಯತ್ನ ನಡೆಸಿದ್ದಳು. ಸರ್ಖೇಜ್‌ನ ಜಿನೇವಾ ಲಿಬರಲ್ ಶಾಲೆಗೆ ಬಂದ ಬೆದರಿಕೆ ಇ-ಮೇಲ್ ಕುರಿತು ವಿಷ್ಣುಭಾಯಿ ಚಮನ್‌ಭಾಯಿ ಖಖಾಡಿಯಾ ಅವರು ನೀಡಿದ ದೂರಿನನ್ವಯ, ಸೈಬರ್ ಅಪರಾಧ ವಿಭಾಗದ ತಂಡಗಳು ಜಂಟಿ ಪೊಲೀಸ್ ಆಯುಕ್ತರಾದ ಶರದ್ ಸಿಂಘಾಲ್, ಡಿಸಿಪಿ ಡಾ. ಲವಿನಾ ಸಿನ್ಹಾ ಮತ್ತು ಎಸಿಪಿ ಹಾರ್ದಿಕ್ ಮಕಾಡಿಯಾ ಅವರ ನೇತೃತ್ವದಲ್ಲಿ ತನಿಖೆಯನ್ನು ಪ್ರಾರಂಭಿಸಿದವು.

ಜೂನ್ 3, 2025 ರಂದು ಬೆಳಿಗ್ಗೆ 10:58 ಕ್ಕೆ divijprabhakaraO@gmail.com ನಿಂದ ಈ ಇ-ಮೇಲ್ ಬಂದಿತ್ತು.

ಸೈಬರ್ ಕ್ರೈಂ ಬ್ರಾಂಚ್ ಮಾನವ ಗುಪ್ತಚರ ಮತ್ತು ಸೈಬರ್ ಪರಿಕರಗಳನ್ನು ಒಳಗೊಂಡಂತೆ ಸಂಪೂರ್ಣ ತಾಂತ್ರಿಕ ವಿಶ್ಲೇಷಣೆ ನಡೆಸಿತು. ಇದರಿಂದಾಗಿ ತಮಿಳುನಾಡಿನ ಚೆನ್ನೈನಲ್ಲಿ ವಾಸವಾಗಿರುವ ಆರೋಪಿ ರೆನೆ ಜೋಶೀಲ್ಡಾಳನ್ನು ಪತ್ತೆಹಚ್ಚಲು ಸಹಾಯವಾಯಿತು. ನಿಖರ ಪುರಾವೆಗಳನ್ನು ಸಂಗ್ರಹಿಸಿದ ನಂತರ, ಚೆನ್ನೈಗೆ ತಂಡವನ್ನು ಕಳುಹಿಸಲಾಗಿತ್ತು. ಅಲ್ಲಿ ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಲಾಯಿತು. ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.

ಈ ಬಂಧನದ ಕುರಿತು ಪ್ರತಿಕ್ರಿಯಿಸಿದ ಉಡುಪಿ ಎಸ್‌ಪಿ ಹರಿರಾಮ್ ಶಂಕರ್, “ಆರೋಪಿಯನ್ನು ತನಿಖೆಗಾಗಿ ನಮಗೆ ಹಸ್ತಾಂತರಿಸುವಂತೆ ಅಹಮದಾಬಾದ್ ಪೊಲೀಸರಿಗೆ ನಾವು ಬರೆಯುತ್ತೇವೆ. ಅಹಮದಾಬಾದ್ ಪೊಲೀಸರ ತನಿಖೆ ಮುಗಿದ ನಂತರ ಆಕೆಯನ್ನು ನಮಗೆ ಹಸ್ತಾಂತರಿಸುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

10 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

13 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

13 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

13 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

13 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

14 hours ago