Featured

ಉಡುಪಿ ಶಾಸಕರಿಗೆ ತಾಕತ್ತು ಇದ್ದರೆ ಮೊದಲು ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಲಿ : ರಮೇಶ್ ಕಾಂಚನ್ ಆಕ್ರೋಶ – vishwanews24

ಉಡುಪಿ: ಪ್ರತಿಭಟನೆಯ ಹೆಸರಿನಲ್ಲಿ ಪುಂಡಾಟಿಕೆ ಮೆರೆಯುವುದು ಶಾಸಕರಿಗೆ ಶೋಭೆ ತರುವಂತಹ ವಿಚಾರವಲ್ಲ

ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿ ಅಸಭ್ಯವಾಗಿ ವರ್ತಿಸಿರುವುದು ಶಾಸಕ ಸ್ಥಾನಕ್ಕೆ ಮಾಡಿರುವ ಅಪಮಾನ : ರಮೇಶ್ ಕಾಂಚನ್

ಉಡುಪಿ: ರಾಜ್ಯದಲ್ಲಿ ನಡೆಯುತ್ತಿಟಿಜಚಿರುವ ವಕ್ಫ್ ಭೂಮಿ ವಿವಾದ ವಿಚಾರದಲ್ಲಿ ಪ್ರತಿಭಟನೆ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದಲ್ಲಿ ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿ ಅಸಭ್ಯವಾಗಿ ವರ್ತಿಸಿರುವುದು ಶಾಸಕ ಸ್ಥಾನಕ್ಕೆ ಮಾಡಿರುವ ಅಪಮಾನ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕನ್ನು ನೀಡಿದ್ದು ಕಾನೂನು ಚೌಕಟ್ಟಿನಡಿಯಲ್ಲಿ ಪ್ರತಿಭಟನೆ ನಡೆಸಬೇಕೇ ಹೊರತು ಪ್ರತಿಭಟನೆಯ ಹೆಸರಿನಲ್ಲಿ ಪುಂಡಾಟಿಕೆ ಮೆರೆಯುವುದು ಶಾಸಕರಿಗೆ ಶೋಭೆ ತರುವಂತಹ ವಿಚಾರವಲ್ಲ. ಪ್ರತಿ ಬಾರಿ ಒಂದಲ್ಲ ಒಂದು ವಿಚಾರದಲ್ಲಿ ಪುಂಡಾಟ ಮೆರೆಯುವ ಶಾಸಕರು ತಮ್ಮ ಸ್ಥಾನದ ಘನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಡಾ. ವಿ ಎಸ್ ಆಚಾರ್ಯ, ಓಸ್ಕರ್ ಫೆರ್ನಾಂಡಿಸ್, ಜಯಪ್ರಕಾಶ್ ಹೆಗ್ಡೆ, ಗೋಪಾಲ ಭಂಡಾರಿ, ವಿನಯ್ ಕುಮಾರ್ ಸೊರಕೆ, ಹಲವಾರು ಮಂದಿ ಶಾಸಕ, ಸಂಸದರಾಗಿ ಸೇವೆ ಸಲ್ಲಿಸಿದ್ದು ಎಂದು ಕೂಡ ತಮ್ಮ ಸಭ್ಯತೆಯನ್ನು ಮರೆಯದೆ ಸಮಾಜಕ್ಕೆ ಮಾದರಿಯಾಗಿದ್ದರು. ಆದರೆ ಉಡುಪಿಯ ಈಗಿನ ಶಾಸಕರು ತಮ್ಮ ಅಸಭ್ಯ ವರ್ತನೆಗಳ ಮೂಲಕ ಜಿಲ್ಲೆಯ ಮಾನವನ್ನು ಹರಾಜು ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳು ಮನವಿ ಸ್ವೀಕಾರಕ್ಕೆ ಬರಲು ಕೆಲವು ನಿಮಿಷಗಳು ವಿಳಂಬವಾಗಿರುವುದೇ ದೊಡ್ಡ ತಪ್ಪು ಎಂಬಂತೆ ಬಿಂಬಿಸಿ ಸಮವಸ್ತ್ರದಲ್ಲಿದ್ದ ಕಾನೂನು ಪಾಲಕರನ್ನು ತಳ್ಳಿ ಜಿಲ್ಲಾಧಿಕಾರಿಗಳ ಕಛೇರಿಗೆ ನುಗ್ಗುವ ಪ್ರಯತ್ನ ಮಾಡಿದ್ದಲ್ಲದೆ ಪೊಲೀಸರೊಂದಿಗೆ ತಳ್ಳಾಟ ನಡೆಸಿರುವುದು ಮೂರ್ಖತನದ ಪರಮಾವಧಿಯಾಗಿದೆ.

ಕ್ಷೇತ್ರದಲ್ಲಿ ಇರುವ ಜ್ವಲಂತ ಸಮಸ್ಯೆಗಳ ಕುರಿತು ಗಮನ ಹರಿಸದೆ ಕೇವಲ ಗೂಂಡಾ ಪ್ರವೃತ್ತಿ ಮೆರೆಯುತ್ತಿರುವುದು ಕ್ಷೇತ್ರದ ಜನತೆಯ ದೌರ್ಭಾಗ್ಯವೇ ಸರಿ. ಇವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ ಕ್ಷೇತ್ರದ ಜನತೆ ಇಂದು ಪರಿತಪಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯ ರಸ್ತೆಗಳು ಡಾಮರು ಕಾಣದೆ ಹೊಂಡಮಯವಾಗಿದೆ, ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ, ಸಂತೆಕಟ್ಟೆ ರಸ್ತೆಕಾಮಗಾರಿ, ಇಂದ್ರಾಳಿ ಬ್ರಿಡ್ಜ್ ಕಾಮಾಗಾರಿ ಪ್ರತಿಯೊಂದು ಕೂಡ ಆಮೆಗತಿಯಲ್ಲಿ ಸಾಗುತ್ತಿದ್ದು ಇದರಿಂದ ನಿತ್ಯ ಸಂಚರಿಸುವ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ಶಾಸಕ ಯಶ್ಪಾಲ್ ಸುವರ್ಣ ದಮ್ಮು ತಾಕತ್ತು ಇದ್ದರೆ ಮೊದಲು ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಲಿ. ಹಾಗೆಯೇ ವಕ್ಫ್ ಆಸ್ತಿ ಒತ್ತುವರಿ ತೆರವು ಗೊಳಿಸಲು 2019 ರಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೋಟಿಸ್ ಜಾರಿಮಾಡಿ ಒಕ್ಕಲೆಬ್ಬಿಸುವ ಕಾರ್ಯಕ್ಕೆ ಚಾಲನೆ ನೀಡಿರುವ ಬಗ್ಗೆಯೂ ಶಾಸಕ ಯಶ್ಪಾಲ್ ಸುವರ್ಣ ಪ್ರತಿಕ್ರಿಯಿಸಲಿ ಎಂದು ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago