Featured

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಉಡುಪಿ : ಜಿಲ್ಲೆಯಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ, ನಿಗಧಿತ ಅವಧಿಯೊಳಗೆ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ನಿಗಧಿತ ಅವಧಿಯೊಳಗೆ ವೆಚ್ಚ ಮಾಡದೇ ಇದ್ದಲ್ಲಿ , ಆರ್ಥಿಕ ಇಲಾಖೆಯಿಂದ ಹೊಸ ಅನುದಾನ ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಜಿಲ್ಲೆಯ ಎಲ್ಲಾ ಶಾಸಕÀರಿಂದ ಕ್ರಿಯಾ ಯೋಜನೆಯನ್ನು ಪಡೆದು, ಕಾಲಮಿತಿಯಲ್ಲಿ ಯೋಜನೆ ಮುಕ್ತಾಯಗೊಳಿಸಿ , ಅನುದಾನವನ್ನು ವೆಚ್ಚ ಮಾಡಿ , ಅನುದಾನವನ್ನು ಪಿಡಿ ಖಾತೆಯಲ್ಲಿ ಇಡಬೇಡಿ ಎಂದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸದೇ ಇರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಅಡಚಣೆಯಾಗಿದ್ದು, ಉಡುಪಿ ಜಿಲ್ಲೆಯು ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ ೨ ನೇ ಸ್ಥಾನದಲ್ಲಿದ್ದು, ಪ್ರಸ್ತುತ ಸಾಲಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸಂಬAದಪಟ್ಟ ಇಲಾಖೆಗಳ ಮೂಲಕ ಶೀಘ್ರದಲ್ಲಿ ಮುಕ್ತಾಯಗೊಳಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಸಚಿವರು ತಿಳಿಸಿದರು

ಜಿಲ್ಲೆಯ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು, ಉಡುಪಿಯಲ್ಲಿನ ಕ್ರೀಡಾ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ,ಇಡೀ ರಾಜ್ಯಕ್ಕೆ ಮಾದರಿಯಾಗುವಂತಹ ಸೌಲಭ್ಯಗಳು ಇಲ್ಲಿದ್ದು, ಇವುಗಳ ಸದ್ಬಳಕೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿನ ಎಲ್ಲಾ ತಾಲೂಕು ಕ್ರೀಡಾಂಗಣಗಳ ಅಭಿವೃದ್ದಿ ಕುರಿತಂತೆ ಸಂಬAದಪಟ್ಟ ಶಾಸಕರಿಂದ ಪ್ರಸ್ತಾವನೆ ಸಲ್ಲಿಸಿ, ಕುಂದಾಪುರದಲ್ಲಿ ತಾಲೂಕಿನಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಆರಂಭಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಉಡುಪಿ ಬ್ಯಾಡ್ಮಂಟನ್ ಕೋರ್ಟ್ ವಿಸ್ತರಣೆ ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಪದವಿ ವರೆಗೆ ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು , ಕ್ರೀಡಾಂಗಣಗಳ ನಿರ್ಮಾಣ ಮತ್ತು ವಿಸ್ತರಣೆ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸುಸಜ್ಜಿತ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago