Featured

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಉಡುಪಿ : ಜಿಲ್ಲೆಯಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ, ನಿಗಧಿತ ಅವಧಿಯೊಳಗೆ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ನಿಗಧಿತ ಅವಧಿಯೊಳಗೆ ವೆಚ್ಚ ಮಾಡದೇ ಇದ್ದಲ್ಲಿ , ಆರ್ಥಿಕ ಇಲಾಖೆಯಿಂದ ಹೊಸ ಅನುದಾನ ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಜಿಲ್ಲೆಯ ಎಲ್ಲಾ ಶಾಸಕÀರಿಂದ ಕ್ರಿಯಾ ಯೋಜನೆಯನ್ನು ಪಡೆದು, ಕಾಲಮಿತಿಯಲ್ಲಿ ಯೋಜನೆ ಮುಕ್ತಾಯಗೊಳಿಸಿ , ಅನುದಾನವನ್ನು ವೆಚ್ಚ ಮಾಡಿ , ಅನುದಾನವನ್ನು ಪಿಡಿ ಖಾತೆಯಲ್ಲಿ ಇಡಬೇಡಿ ಎಂದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸದೇ ಇರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಅಡಚಣೆಯಾಗಿದ್ದು, ಉಡುಪಿ ಜಿಲ್ಲೆಯು ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ ೨ ನೇ ಸ್ಥಾನದಲ್ಲಿದ್ದು, ಪ್ರಸ್ತುತ ಸಾಲಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸಂಬAದಪಟ್ಟ ಇಲಾಖೆಗಳ ಮೂಲಕ ಶೀಘ್ರದಲ್ಲಿ ಮುಕ್ತಾಯಗೊಳಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಸಚಿವರು ತಿಳಿಸಿದರು

ಜಿಲ್ಲೆಯ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು, ಉಡುಪಿಯಲ್ಲಿನ ಕ್ರೀಡಾ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ,ಇಡೀ ರಾಜ್ಯಕ್ಕೆ ಮಾದರಿಯಾಗುವಂತಹ ಸೌಲಭ್ಯಗಳು ಇಲ್ಲಿದ್ದು, ಇವುಗಳ ಸದ್ಬಳಕೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿನ ಎಲ್ಲಾ ತಾಲೂಕು ಕ್ರೀಡಾಂಗಣಗಳ ಅಭಿವೃದ್ದಿ ಕುರಿತಂತೆ ಸಂಬAದಪಟ್ಟ ಶಾಸಕರಿಂದ ಪ್ರಸ್ತಾವನೆ ಸಲ್ಲಿಸಿ, ಕುಂದಾಪುರದಲ್ಲಿ ತಾಲೂಕಿನಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಆರಂಭಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಉಡುಪಿ ಬ್ಯಾಡ್ಮಂಟನ್ ಕೋರ್ಟ್ ವಿಸ್ತರಣೆ ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಪದವಿ ವರೆಗೆ ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು , ಕ್ರೀಡಾಂಗಣಗಳ ನಿರ್ಮಾಣ ಮತ್ತು ವಿಸ್ತರಣೆ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸುಸಜ್ಜಿತ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago