Featured

ಉಡುಪಿ : ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ : ರಮೇಶ್ ಕಾಂಚನ್ – vishwanews24

ಶಾಸಕರೇ ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡಬೇಡಿ : ಎಚ್ಚರಿಸಿದ ರಮೇಶ್ ಕಾಂಚನ್

ಉಡುಪಿ: ಶಾಸಕರು ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಎಚ್ಚರಿಸಿದ್ದಾರೆ.

ಕುಂದಾಪುರದ ಪ್ರಾಂಶುಪಾಲರ ಪ್ರಶಸ್ತಿ ತಡೆ ಕುರಿತಾಗಿ ಅಸಾಂವಿಧಾನಿಕ, ಅನಾಗರಿಕ ರೀತಿಯಲ್ಲಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಾಗಿರುವುದರ ಬಗ್ಗೆ ಮೊದಲು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ., ಜ್ಞಾನದ ಬೆಳಕನ್ನು ನೀಡಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ.

ಶಿಕ್ಷಕರ ಮೇಲೆ ಗೌರವದ ನೆಪ ಇಟ್ಟುಕೊಂಡು ಕಾನೂನಿಗೆ ವಿರುದ್ಧವಾಗಿ ಅನಾಗರಿಕ ರೀತಿಯಲ್ಲಿ ತಮ್ಮವರು ಪ್ರತಿಭಟನ ನಡೆಯುವಾಗ ಕಾನೂನು ರೂಪಿಸುವ ರಾಜ್ಯ ಶಾಸಕಾಂಗದ ಸದಸ್ಯನಾಗಿ ಅದನ್ನು ತಡೆಯಬೇಕಿತ್ತು.

ಅಂದು ಅನಾಗರಿಕ ವರ್ತನೆಯ ಪ್ರಕರಣದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದವರಿಗೆ ನೂರಾರು ಪೋಲಿಸ್ ಕೇಸ್ ಗಳೇ ಶೋಭಾಯಮಾನ ಎಂದುಕೊಳ್ಳುವುದರಲ್ಲಿ ವಿಶೇಷತೆ ಎನೂ ಇಲ್ಲ.ಆದರೆ ತಾವು ಇದೀಗ ವಿದ್ಯಾವಂತರ ನಾಡು ಎಂಬ ಅಭಿದಾನ ಪಡೆದುಕೊಂಡ ಉಡುಪಿಯ ಜನಪ್ರತಿನಿಧಿ ಎಂಬ ಪರಿಜ್ಞಾನವನ್ನು ಇಟ್ಟುಕೊಂಡು ಸರಕಾರದೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಉತ್ತಮ ಚಿಂತನೆ,ಪರಿಕಲ್ಪನೆಯಿಂದ ಅಭಿವೃದ್ಧಿ ಕೆಲಸಗಳು ಮತ್ತು ಉಡುಪಿಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಶ್ರಮವಹಿಸುವಂತೆ ರಮೇಶ್ ಕಾಂಚನ್ ಸಲಹೆ ನೀಡಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

53 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

2 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago