Featured

ಉಡುಪಿ : ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ : ರಮೇಶ್ ಕಾಂಚನ್ – vishwanews24

ಶಾಸಕರೇ ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡಬೇಡಿ : ಎಚ್ಚರಿಸಿದ ರಮೇಶ್ ಕಾಂಚನ್

ಉಡುಪಿ: ಶಾಸಕರು ಅಭಿವೃದ್ಧಿಯನ್ನು ಮರೆತು ಕ್ಷುಲ್ಲಕ ರಾಜಕಾರಣ ಮಾಡದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಎಚ್ಚರಿಸಿದ್ದಾರೆ.

ಕುಂದಾಪುರದ ಪ್ರಾಂಶುಪಾಲರ ಪ್ರಶಸ್ತಿ ತಡೆ ಕುರಿತಾಗಿ ಅಸಾಂವಿಧಾನಿಕ, ಅನಾಗರಿಕ ರೀತಿಯಲ್ಲಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಾಗಿರುವುದರ ಬಗ್ಗೆ ಮೊದಲು ಶಾಸಕರು ಆತ್ಮ ವಿಮರ್ಶೆ ಮಾಡಿಕೊಳ್ಳಲಿ., ಜ್ಞಾನದ ಬೆಳಕನ್ನು ನೀಡಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಕರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಗೌರವ, ಅತೀವ ಕಾಳಜಿ ಇದೆ.

ಶಿಕ್ಷಕರ ಮೇಲೆ ಗೌರವದ ನೆಪ ಇಟ್ಟುಕೊಂಡು ಕಾನೂನಿಗೆ ವಿರುದ್ಧವಾಗಿ ಅನಾಗರಿಕ ರೀತಿಯಲ್ಲಿ ತಮ್ಮವರು ಪ್ರತಿಭಟನ ನಡೆಯುವಾಗ ಕಾನೂನು ರೂಪಿಸುವ ರಾಜ್ಯ ಶಾಸಕಾಂಗದ ಸದಸ್ಯನಾಗಿ ಅದನ್ನು ತಡೆಯಬೇಕಿತ್ತು.

ಅಂದು ಅನಾಗರಿಕ ವರ್ತನೆಯ ಪ್ರಕರಣದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದವರಿಗೆ ನೂರಾರು ಪೋಲಿಸ್ ಕೇಸ್ ಗಳೇ ಶೋಭಾಯಮಾನ ಎಂದುಕೊಳ್ಳುವುದರಲ್ಲಿ ವಿಶೇಷತೆ ಎನೂ ಇಲ್ಲ.ಆದರೆ ತಾವು ಇದೀಗ ವಿದ್ಯಾವಂತರ ನಾಡು ಎಂಬ ಅಭಿದಾನ ಪಡೆದುಕೊಂಡ ಉಡುಪಿಯ ಜನಪ್ರತಿನಿಧಿ ಎಂಬ ಪರಿಜ್ಞಾನವನ್ನು ಇಟ್ಟುಕೊಂಡು ಸರಕಾರದೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಉತ್ತಮ ಚಿಂತನೆ,ಪರಿಕಲ್ಪನೆಯಿಂದ ಅಭಿವೃದ್ಧಿ ಕೆಲಸಗಳು ಮತ್ತು ಉಡುಪಿಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಶ್ರಮವಹಿಸುವಂತೆ ರಮೇಶ್ ಕಾಂಚನ್ ಸಲಹೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

17 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

17 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

18 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

18 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

19 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

20 hours ago