ಉಡುಪಿ: ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಎಂಬಾತನನ್ನು ನ.5ರಂದು ಸಂಘದ ಆಡಳಿತ ಮಂಡಳಿ ತೀರ್ಮಾನದಂತೆ ಬೇರೆ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕಾವಡಿ ಶಾಖೆಗೆ ಮ್ಯಾನೇಜರ್ ಆಗಿ ವರ್ಗಾವಣೆಗೊಂಡು ಬಂದ ರಾಮ, ಹಿಂದಿನ ಮ್ಯಾನೇಜರ್ ಸುರೇಶ್ ಭಟ್ ಅವರಿಂದ ಅಧಿಕಾರ ವಹಿಸಿಕೊಳ್ಳುವ ವೇಳೆ ಕಾವಡಿ ಶಾಖೆಯಲ್ಲಿ ಸಂಗ್ರಹವಾದ ಸುಮಾರು 1.70 ಕೋಟಿ ರೂ. ವ್ಯತ್ಯಾಸ ಕಂಡುಬಂದಿತ್ತು. ಅದರಂತೆ ರಾಮ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಚೇರಿ ಸಿಬ್ಬಂದಿ ಜೊತೆ ತೆರಳಿ ಪರಿಶೀಲಿಸಿದ್ದು, ಈ ಸಂದರ್ಭ 1.70 ಕೋಟಿ ರೂ. ವಂಚಿಸಿರುವುದು ತಿಳಿದು ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಅಲ್ಲದೇ ಹರೀಶ್ ಕುಲಾಲ್ ಈ ಹಿಂದೆ ಕಾವಡಿ ಶಾಖೆಯಲ್ಲಿ ಆತನ ಚಿನ್ನಾಭರಣ ಅಡವಿಟ್ಟು 21 ಲಕ್ಷ ರೂ. ಪಡೆದಿದ್ದು, ಅದನ್ನು ಪರಿಶೀಲಿಸಿದಾಗ ಹರೀಶ್ ಕುಲಾಲ್, ಅಡವಿಟ್ಟ ಚಿನ್ನಾಭರಣ ಇಲ್ಲದೇ ಇರುವುದು ಬೆಳಕಿಗೆ ಬಂತು. ಇವರಿಬ್ಬರು ಸಂಘಟಿತವಾಗಿ ಸೇರಿಕೊಂಡು ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಮೋಸ ಮಾಡಿ ವಂಚಿಸುವ ಸಲುವಾಗಿ ದ್ರೋಹ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…