Featured

ಉಡುಪಿ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ; ಕಾವಡಿ ಶಾಖೆ ವ್ಯವಸ್ಥಾಪಕ ಹಾಗೂ ಸಿಬ್ಬಂದ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ; ಕಾವಡಿ ಶಾಖೆ ವ್ಯವಸ್ಥಾಪಕ ಹಾಗೂ ಸಿಬ್ಬಂದ ವಿರುದ್ಧ ಪ್ರಕರಣ ದಾಖಲು

ಉಡುಪಿ: ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಎಂಬಾತನನ್ನು ನ.5ರಂದು ಸಂಘದ ಆಡಳಿತ ಮಂಡಳಿ ತೀರ್ಮಾನದಂತೆ ಬೇರೆ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕಾವಡಿ ಶಾಖೆಗೆ ಮ್ಯಾನೇಜರ್ ಆಗಿ ವರ್ಗಾವಣೆಗೊಂಡು ಬಂದ ರಾಮ, ಹಿಂದಿನ ಮ್ಯಾನೇಜರ್ ಸುರೇಶ್ ಭಟ್ ಅವರಿಂದ ಅಧಿಕಾರ ವಹಿಸಿಕೊಳ್ಳುವ ವೇಳೆ ಕಾವಡಿ ಶಾಖೆಯಲ್ಲಿ ಸಂಗ್ರಹವಾದ ಸುಮಾರು 1.70 ಕೋಟಿ ರೂ. ವ್ಯತ್ಯಾಸ ಕಂಡುಬಂದಿತ್ತು. ಅದರಂತೆ ರಾಮ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಚೇರಿ ಸಿಬ್ಬಂದಿ ಜೊತೆ ತೆರಳಿ ಪರಿಶೀಲಿಸಿದ್ದು, ಈ ಸಂದರ್ಭ 1.70 ಕೋಟಿ ರೂ. ವಂಚಿಸಿರುವುದು ತಿಳಿದು ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೇ ಹರೀಶ್ ಕುಲಾಲ್ ಈ ಹಿಂದೆ ಕಾವಡಿ ಶಾಖೆಯಲ್ಲಿ ಆತನ ಚಿನ್ನಾಭರಣ ಅಡವಿಟ್ಟು 21 ಲಕ್ಷ ರೂ. ಪಡೆದಿದ್ದು, ಅದನ್ನು ಪರಿಶೀಲಿಸಿದಾಗ ಹರೀಶ್ ಕುಲಾಲ್, ಅಡವಿಟ್ಟ ಚಿನ್ನಾಭರಣ ಇಲ್ಲದೇ ಇರುವುದು ಬೆಳಕಿಗೆ ಬಂತು. ಇವರಿಬ್ಬರು ಸಂಘಟಿತವಾಗಿ ಸೇರಿಕೊಂಡು ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಮೋಸ ಮಾಡಿ ವಂಚಿಸುವ ಸಲುವಾಗಿ ದ್ರೋಹ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

19 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

19 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

20 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

21 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

22 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

22 hours ago