Featured

ಉಡುಪಿ: ‘ಶಿರೂರು ಶ್ರೀಗಳಿಗೆ ವಿಷಪ್ರಾಶನವಾಗಿಲ್ಲ’ ; ಶ್ರೀಗಳದ್ದು ಸಹಜ ಸಾವು ,ಅನುಮಾನಗಳಿಗೆ ತೆರೆ ಎಳೆದ ಎಫ್ಎಸ್ಎಲ್ ವರದಿ

ಉಡುಪಿ,: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಕುರಿತ ಎಫ್ಎಸ್ಎಲ್ ವರದಿ ಹೊರಬಿದ್ದಿದೆ. ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ ಎನ್ನುವ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿದ ವರದಿ ಕೊನೆಗೂ ಪೊಲೀಸರ ಕೈ ಸೇರಿದೆ. ಶ್ರೀ ಲಕ್ಷ್ಮೀವರ ಸ್ಚ್ವಾಮೀಜಿ ಲಿವರ್ ನ(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎನ್ನುವ ಸಾರಾಂಶ ಈ ವರದಿಯಲ್ಲಿದೆ. ಈ ವರದಿ ಸ್ವಾಮೀಜಿಯ ಸಾವಿನ ಬಳಿಕ ಎದ್ದಿರುವ ಅನೇಕ ಸಂಶಯಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.

ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯನ್ನು, ಮರಣೋತ್ತರ ಪರೀಕ್ಷೆಯ ವರದಿಯೊಂದಿಗೆ ತಾಳೆ ಹಾಕಿ ಸ್ವಾಮೀಜಿ ಲಿವರ್ ಸಂಬಂಧಿತ ಸಿರೋಸಿಸ್ ಕಾಯಿಲೆಯಿಂದಲೇ, ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಈ ವರದಿಯಲ್ಲಿ ಎಲ್ಲಿಯೂ ಕೂಡಾ ‘ವಿಷ ‘ದ ಕುರಿತು ಉಲ್ಲೇಖವಾಗಿಲ್ಲ. ಅಂತಿಮ ವರದಿ ಬಂದ ನಂತರವೂ ಪೊಲೀಸರು ಕೆಲವು ವಿಚಾರಗಳಲ್ಲಿ ಸ್ಪಷ್ಟತೆ ಬಯಸಿ ಕೆಎಂಸಿ ಆಸ್ಪತ್ರೆಗೆ ಪ್ರಶ್ನಾವಳಿಯೊಂದನ್ನು ತಯಾರಿಸಿ ಉತ್ತರಿಸುವಂತೆ ತಿಳಿಸಿದ್ದಾರೆ. ಜುಲೈ 19 ರಂದು ಸ್ವಾಮೀಜಿ ಮೃತಪಟ್ಟಿದ್ದ ಸಂದರ್ಭದಲ್ಲಿ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಮಾಧ್ಯಮಗಳೊಂದಿಗೆ ಮಾತನಾಡುತ್ತ, ಸ್ವಾಮೀಜಿ ದೇಹದಲ್ಲಿ ವಿಷ ಕಂಡುಬಂದಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದರು. ನಂತರ ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿತ್ತು. ಈಗ ವರದಿಯಲ್ಲಿ ವಿಷದ ಅಂಶವಿಲ್ಲದಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಪಷ್ಟತೆ ಬಯಸಿದ್ದಾರೆ. ಹೀಗಾಗಿ ಆಗಸ್ಟ್ 24 ರ ಒಳಗೆ ಆಸ್ಪತ್ರೆಯಿಂದ ಉತ್ತರವನ್ನು ಪೊಲೀಸರು ಬಯಸಿದ್ದು, ಹೀಗಾಗಿ ಈ ವಾರದಲ್ಲಿ ಪ್ರಕರಣಕ್ಕೆ ಅಂತಿಮ ತೆರೆ ಎಳೆಯುವ ಸಾಧ್ಯತೆಗಳಿವೆ.

ಶಿರೂರು ಶ್ರೀ ಸಾವಿನ ಪ್ರಕರಣದ ಕುರಿತು ಪೊಲೀಸ್ ಇಲಾಖೆ ಮಠದ ಸಿಬ್ಬಂದಿಗಳು,ಕುಟುಂಬ ದವರು, ಮಿತ್ರರು, ಆರ್ಥಿಕ ವ್ಯವಹಾರವಿದ್ದವರು, ಮದ್ಯ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ 80ಕ್ಕೂ ಹೆಚ್ಚು ಮಂದಿ ಯನ್ನು ವಿಚಾರಣೆಗೆ ಒಳಪಡಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago