Featured

ಉಡುಪಿ: ‘ಶಿರೂರು ಶ್ರೀಗಳಿಗೆ ವಿಷಪ್ರಾಶನವಾಗಿಲ್ಲ’ ; ಶ್ರೀಗಳದ್ದು ಸಹಜ ಸಾವು ,ಅನುಮಾನಗಳಿಗೆ ತೆರೆ ಎಳೆದ ಎಫ್ಎಸ್ಎಲ್ ವರದಿ

ಉಡುಪಿ,: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಕುರಿತ ಎಫ್ಎಸ್ಎಲ್ ವರದಿ ಹೊರಬಿದ್ದಿದೆ. ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ ಎನ್ನುವ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿದ ವರದಿ ಕೊನೆಗೂ ಪೊಲೀಸರ ಕೈ ಸೇರಿದೆ. ಶ್ರೀ ಲಕ್ಷ್ಮೀವರ ಸ್ಚ್ವಾಮೀಜಿ ಲಿವರ್ ನ(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎನ್ನುವ ಸಾರಾಂಶ ಈ ವರದಿಯಲ್ಲಿದೆ. ಈ ವರದಿ ಸ್ವಾಮೀಜಿಯ ಸಾವಿನ ಬಳಿಕ ಎದ್ದಿರುವ ಅನೇಕ ಸಂಶಯಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.

ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯನ್ನು, ಮರಣೋತ್ತರ ಪರೀಕ್ಷೆಯ ವರದಿಯೊಂದಿಗೆ ತಾಳೆ ಹಾಕಿ ಸ್ವಾಮೀಜಿ ಲಿವರ್ ಸಂಬಂಧಿತ ಸಿರೋಸಿಸ್ ಕಾಯಿಲೆಯಿಂದಲೇ, ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಈ ವರದಿಯಲ್ಲಿ ಎಲ್ಲಿಯೂ ಕೂಡಾ ‘ವಿಷ ‘ದ ಕುರಿತು ಉಲ್ಲೇಖವಾಗಿಲ್ಲ. ಅಂತಿಮ ವರದಿ ಬಂದ ನಂತರವೂ ಪೊಲೀಸರು ಕೆಲವು ವಿಚಾರಗಳಲ್ಲಿ ಸ್ಪಷ್ಟತೆ ಬಯಸಿ ಕೆಎಂಸಿ ಆಸ್ಪತ್ರೆಗೆ ಪ್ರಶ್ನಾವಳಿಯೊಂದನ್ನು ತಯಾರಿಸಿ ಉತ್ತರಿಸುವಂತೆ ತಿಳಿಸಿದ್ದಾರೆ. ಜುಲೈ 19 ರಂದು ಸ್ವಾಮೀಜಿ ಮೃತಪಟ್ಟಿದ್ದ ಸಂದರ್ಭದಲ್ಲಿ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಮಾಧ್ಯಮಗಳೊಂದಿಗೆ ಮಾತನಾಡುತ್ತ, ಸ್ವಾಮೀಜಿ ದೇಹದಲ್ಲಿ ವಿಷ ಕಂಡುಬಂದಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದರು. ನಂತರ ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿತ್ತು. ಈಗ ವರದಿಯಲ್ಲಿ ವಿಷದ ಅಂಶವಿಲ್ಲದಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಪಷ್ಟತೆ ಬಯಸಿದ್ದಾರೆ. ಹೀಗಾಗಿ ಆಗಸ್ಟ್ 24 ರ ಒಳಗೆ ಆಸ್ಪತ್ರೆಯಿಂದ ಉತ್ತರವನ್ನು ಪೊಲೀಸರು ಬಯಸಿದ್ದು, ಹೀಗಾಗಿ ಈ ವಾರದಲ್ಲಿ ಪ್ರಕರಣಕ್ಕೆ ಅಂತಿಮ ತೆರೆ ಎಳೆಯುವ ಸಾಧ್ಯತೆಗಳಿವೆ.

ಶಿರೂರು ಶ್ರೀ ಸಾವಿನ ಪ್ರಕರಣದ ಕುರಿತು ಪೊಲೀಸ್ ಇಲಾಖೆ ಮಠದ ಸಿಬ್ಬಂದಿಗಳು,ಕುಟುಂಬ ದವರು, ಮಿತ್ರರು, ಆರ್ಥಿಕ ವ್ಯವಹಾರವಿದ್ದವರು, ಮದ್ಯ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ 80ಕ್ಕೂ ಹೆಚ್ಚು ಮಂದಿ ಯನ್ನು ವಿಚಾರಣೆಗೆ ಒಳಪಡಿಸಿದ್ದರು.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

5 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 hours ago