Featured

ಉಡುಪಿ: ‘ಶಿರೂರು ಶ್ರೀಗಳಿಗೆ ವಿಷಪ್ರಾಶನವಾಗಿಲ್ಲ’ ; ಶ್ರೀಗಳದ್ದು ಸಹಜ ಸಾವು ,ಅನುಮಾನಗಳಿಗೆ ತೆರೆ ಎಳೆದ ಎಫ್ಎಸ್ಎಲ್ ವರದಿ

ಉಡುಪಿ,: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಕುರಿತ ಎಫ್ಎಸ್ಎಲ್ ವರದಿ ಹೊರಬಿದ್ದಿದೆ. ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ ಎನ್ನುವ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿದ ವರದಿ ಕೊನೆಗೂ ಪೊಲೀಸರ ಕೈ ಸೇರಿದೆ. ಶ್ರೀ ಲಕ್ಷ್ಮೀವರ ಸ್ಚ್ವಾಮೀಜಿ ಲಿವರ್ ನ(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎನ್ನುವ ಸಾರಾಂಶ ಈ ವರದಿಯಲ್ಲಿದೆ. ಈ ವರದಿ ಸ್ವಾಮೀಜಿಯ ಸಾವಿನ ಬಳಿಕ ಎದ್ದಿರುವ ಅನೇಕ ಸಂಶಯಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.

ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯನ್ನು, ಮರಣೋತ್ತರ ಪರೀಕ್ಷೆಯ ವರದಿಯೊಂದಿಗೆ ತಾಳೆ ಹಾಕಿ ಸ್ವಾಮೀಜಿ ಲಿವರ್ ಸಂಬಂಧಿತ ಸಿರೋಸಿಸ್ ಕಾಯಿಲೆಯಿಂದಲೇ, ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಈ ವರದಿಯಲ್ಲಿ ಎಲ್ಲಿಯೂ ಕೂಡಾ ‘ವಿಷ ‘ದ ಕುರಿತು ಉಲ್ಲೇಖವಾಗಿಲ್ಲ. ಅಂತಿಮ ವರದಿ ಬಂದ ನಂತರವೂ ಪೊಲೀಸರು ಕೆಲವು ವಿಚಾರಗಳಲ್ಲಿ ಸ್ಪಷ್ಟತೆ ಬಯಸಿ ಕೆಎಂಸಿ ಆಸ್ಪತ್ರೆಗೆ ಪ್ರಶ್ನಾವಳಿಯೊಂದನ್ನು ತಯಾರಿಸಿ ಉತ್ತರಿಸುವಂತೆ ತಿಳಿಸಿದ್ದಾರೆ. ಜುಲೈ 19 ರಂದು ಸ್ವಾಮೀಜಿ ಮೃತಪಟ್ಟಿದ್ದ ಸಂದರ್ಭದಲ್ಲಿ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಮಾಧ್ಯಮಗಳೊಂದಿಗೆ ಮಾತನಾಡುತ್ತ, ಸ್ವಾಮೀಜಿ ದೇಹದಲ್ಲಿ ವಿಷ ಕಂಡುಬಂದಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದರು. ನಂತರ ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿತ್ತು. ಈಗ ವರದಿಯಲ್ಲಿ ವಿಷದ ಅಂಶವಿಲ್ಲದಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಪಷ್ಟತೆ ಬಯಸಿದ್ದಾರೆ. ಹೀಗಾಗಿ ಆಗಸ್ಟ್ 24 ರ ಒಳಗೆ ಆಸ್ಪತ್ರೆಯಿಂದ ಉತ್ತರವನ್ನು ಪೊಲೀಸರು ಬಯಸಿದ್ದು, ಹೀಗಾಗಿ ಈ ವಾರದಲ್ಲಿ ಪ್ರಕರಣಕ್ಕೆ ಅಂತಿಮ ತೆರೆ ಎಳೆಯುವ ಸಾಧ್ಯತೆಗಳಿವೆ.

ಶಿರೂರು ಶ್ರೀ ಸಾವಿನ ಪ್ರಕರಣದ ಕುರಿತು ಪೊಲೀಸ್ ಇಲಾಖೆ ಮಠದ ಸಿಬ್ಬಂದಿಗಳು,ಕುಟುಂಬ ದವರು, ಮಿತ್ರರು, ಆರ್ಥಿಕ ವ್ಯವಹಾರವಿದ್ದವರು, ಮದ್ಯ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ 80ಕ್ಕೂ ಹೆಚ್ಚು ಮಂದಿ ಯನ್ನು ವಿಚಾರಣೆಗೆ ಒಳಪಡಿಸಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago