Featured

ಉಡುಪಿ: ಶಿರೂರು ಶ್ರೀಗಳ ಸ್ಮರಣಾರ್ಥ ಕೃಷ್ಣ ನಗರಿಯಲ್ಲಿ ನಡೆಯಲಿದೆ ಹುಲಿ ವೇಷ ಸ್ಪರ್ಧೆ

ಉಡುಪಿ,: ಕೃಷ್ಣ ನಗರಿ ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದು, ಶ್ರೀಗಳ ಸ್ಮರಣಾರ್ಥ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

ಸ್ಪರ್ಧೆಯ ಕುರಿತಂತೆ ಇಂದು (ಆಗಸ್ಟ್ 11) ಸಂಜೆ 5 ಗಂಟೆಗೆ ಸಮಾಲೋಚನಾ ಸಭೆಯನ್ನು ರಾಜಾಂಗಣದ ಪಾರ್ಕಿಂಗ್ ಬಳಿ ಇರುವ ಮಥುರಾ ಛತ್ರದ ಹಾಲ್‌ನಲ್ಲಿ ಕರೆಯಲಾಗಿದೆ. ಮಾತ್ರವಲ್ಲ ಆಸಕ್ತರು, ಶ್ರೀಗಳ ಸ್ಮರಣಾರ್ಥವಾಗಿ ಆಯೋಜಿಸಿರುವ ಈ ಹುಲಿವೇಷ ಸ್ಪರ್ಧೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಭಾಗವಹಿಸುವಂತೆ ಕೋರಲಾಗಿದೆ.

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಶಿರೂರು ಶ್ರೀಗಳು ಉಡುಪಿಯಲ್ಲಿ ಜನಸಾಮಾನ್ಯರ ಸ್ವಾಮೀಜಿ ಎಂದೇ ಹೆಸರು ಗಳಿಸಿದ್ದರು. ಸಂಗೀತ, ರಾಜಕೀಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಶಿರೂರು ಶ್ರೀಗಳು ತನ್ನ ಎರಡು ಅವಧಿಯ ಪರ್ಯಾಯದಲ್ಲಿ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅವ್ಯವಹಾರ ತಡೆಯುವಲ್ಲೂ ಯಶಸ್ವಿಯಾಗಿದ್ದರು. ಮಾತ್ರವಲ್ಲ, ಹುಲಿವೇಷದಂತಹ ಜಾನಪದ ಕಲೆಗಳಲ್ಲಿ ಶ್ರೀಗಳಿಗೆ ಅಪಾರ ಆಸಕ್ತಿ ಇತ್ತು. ಇದೇ ಕಾರಣದಿಂದ ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀಗಳ ಸ್ಮರಣಾರ್ಥವಾಗಿ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago