Featured

ಉಡುಪಿ: ಶಿರೂರು ಶ್ರೀಗಳ ಸ್ಮರಣಾರ್ಥ ಕೃಷ್ಣ ನಗರಿಯಲ್ಲಿ ನಡೆಯಲಿದೆ ಹುಲಿ ವೇಷ ಸ್ಪರ್ಧೆ

ಉಡುಪಿ,: ಕೃಷ್ಣ ನಗರಿ ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದು, ಶ್ರೀಗಳ ಸ್ಮರಣಾರ್ಥ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

ಸ್ಪರ್ಧೆಯ ಕುರಿತಂತೆ ಇಂದು (ಆಗಸ್ಟ್ 11) ಸಂಜೆ 5 ಗಂಟೆಗೆ ಸಮಾಲೋಚನಾ ಸಭೆಯನ್ನು ರಾಜಾಂಗಣದ ಪಾರ್ಕಿಂಗ್ ಬಳಿ ಇರುವ ಮಥುರಾ ಛತ್ರದ ಹಾಲ್‌ನಲ್ಲಿ ಕರೆಯಲಾಗಿದೆ. ಮಾತ್ರವಲ್ಲ ಆಸಕ್ತರು, ಶ್ರೀಗಳ ಸ್ಮರಣಾರ್ಥವಾಗಿ ಆಯೋಜಿಸಿರುವ ಈ ಹುಲಿವೇಷ ಸ್ಪರ್ಧೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಭಾಗವಹಿಸುವಂತೆ ಕೋರಲಾಗಿದೆ.

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಶಿರೂರು ಶ್ರೀಗಳು ಉಡುಪಿಯಲ್ಲಿ ಜನಸಾಮಾನ್ಯರ ಸ್ವಾಮೀಜಿ ಎಂದೇ ಹೆಸರು ಗಳಿಸಿದ್ದರು. ಸಂಗೀತ, ರಾಜಕೀಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಶಿರೂರು ಶ್ರೀಗಳು ತನ್ನ ಎರಡು ಅವಧಿಯ ಪರ್ಯಾಯದಲ್ಲಿ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅವ್ಯವಹಾರ ತಡೆಯುವಲ್ಲೂ ಯಶಸ್ವಿಯಾಗಿದ್ದರು. ಮಾತ್ರವಲ್ಲ, ಹುಲಿವೇಷದಂತಹ ಜಾನಪದ ಕಲೆಗಳಲ್ಲಿ ಶ್ರೀಗಳಿಗೆ ಅಪಾರ ಆಸಕ್ತಿ ಇತ್ತು. ಇದೇ ಕಾರಣದಿಂದ ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀಗಳ ಸ್ಮರಣಾರ್ಥವಾಗಿ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

15 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

15 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago