Featured

ಉಡುಪಿ: ಶಿರೂರು ಶ್ರೀಗಳ ಸ್ಮರಣಾರ್ಥ ಕೃಷ್ಣ ನಗರಿಯಲ್ಲಿ ನಡೆಯಲಿದೆ ಹುಲಿ ವೇಷ ಸ್ಪರ್ಧೆ

ಉಡುಪಿ,: ಕೃಷ್ಣ ನಗರಿ ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದು, ಶ್ರೀಗಳ ಸ್ಮರಣಾರ್ಥ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

ಸ್ಪರ್ಧೆಯ ಕುರಿತಂತೆ ಇಂದು (ಆಗಸ್ಟ್ 11) ಸಂಜೆ 5 ಗಂಟೆಗೆ ಸಮಾಲೋಚನಾ ಸಭೆಯನ್ನು ರಾಜಾಂಗಣದ ಪಾರ್ಕಿಂಗ್ ಬಳಿ ಇರುವ ಮಥುರಾ ಛತ್ರದ ಹಾಲ್‌ನಲ್ಲಿ ಕರೆಯಲಾಗಿದೆ. ಮಾತ್ರವಲ್ಲ ಆಸಕ್ತರು, ಶ್ರೀಗಳ ಸ್ಮರಣಾರ್ಥವಾಗಿ ಆಯೋಜಿಸಿರುವ ಈ ಹುಲಿವೇಷ ಸ್ಪರ್ಧೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಭಾಗವಹಿಸುವಂತೆ ಕೋರಲಾಗಿದೆ.

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಶಿರೂರು ಶ್ರೀಗಳು ಉಡುಪಿಯಲ್ಲಿ ಜನಸಾಮಾನ್ಯರ ಸ್ವಾಮೀಜಿ ಎಂದೇ ಹೆಸರು ಗಳಿಸಿದ್ದರು. ಸಂಗೀತ, ರಾಜಕೀಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಶಿರೂರು ಶ್ರೀಗಳು ತನ್ನ ಎರಡು ಅವಧಿಯ ಪರ್ಯಾಯದಲ್ಲಿ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅವ್ಯವಹಾರ ತಡೆಯುವಲ್ಲೂ ಯಶಸ್ವಿಯಾಗಿದ್ದರು. ಮಾತ್ರವಲ್ಲ, ಹುಲಿವೇಷದಂತಹ ಜಾನಪದ ಕಲೆಗಳಲ್ಲಿ ಶ್ರೀಗಳಿಗೆ ಅಪಾರ ಆಸಕ್ತಿ ಇತ್ತು. ಇದೇ ಕಾರಣದಿಂದ ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀಗಳ ಸ್ಮರಣಾರ್ಥವಾಗಿ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

4 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

4 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

4 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

7 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

7 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

7 hours ago