ಉಡುಪಿ : ಶಿರ್ವ, ಬೆಳ್ಮಣ್ ಸಹಿತ 16 ಗ್ರಾ. ಪಂ. ಪೂರ್ಣ ಪ್ರಮಾಣದ ಲಾಕ್‌ಡೌನ್ – Vishwanews24

ಉಡುಪಿ : ಶಿರ್ವ, ಬೆಳ್ಮಣ್ ಸಹಿತ 16 ಗ್ರಾ. ಪಂ. ಪೂರ್ಣ ಪ್ರಮಾಣದ ಲಾಕ್‌ಡೌನ್ – Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವುದರ ಜೊತೆಗೆ ಕೋವಿಡ್‌ನ 3ನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್‌ಗಳನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮುಂದುವರೆಸಬೇಕು ಎಂದರು.

ಕಳೆದ ಐದು ದಿನಗಳಿಂದ 50ಕ್ಕೂ ಹೆಚ್ಚು ಪ್ರಕರಣಗಳು ಇರುವ ಗ್ರಾಮಪಂಚಾಯತ್‌ಗಳನ್ನು ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆ ಪ್ರಸಕ್ತ 50ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, ನಲ್ಲೂರು, ಮರ್ಣೆ, ಹೆಬ್ರಿಯ ವರಂಗ, ಕುಂದಾಪುರದ ಗಂಗೊಳ್ಳಿ, ಆಲೂರು, ಕಾಪುವಿನ ಶಿರ್ವ, ಬೆಳ್ಳೆ, ಬ್ರಹ್ಮಾವರದ ಆವರ್ಸೆ, ಕೊಕ್ಕರ್ಣೆ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಬೇಕೆಂದರು.

3ನೇ ಅಲೆ ಕೋವಿಡ್ ನಿರೋಧಕ ಲಸಿಕೆ ಪಡೆಯದ ಮಕ್ಕಳನ್ನು ಬಾದಿಸುವ ಸಾಧ್ಯತೆಗಳಿವೆ. ಮಾಧ್ಯಮಗಳಲ್ಲಿ ತಜ್ಞರು ಸಹ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.

ಒಂದೊಮ್ಮೆ ಹೆಚ್ಚು ಪ್ರಕರಣಗಳು ಕಂಡುಬoದಲ್ಲಿ ಅವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉತ್ತಮ ಚಿಕಿತ್ಸೆ ನೀಡಬೇಕು ಎಂದರು. ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಇರುವ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಈಗಾಗಲೇ ಸರ್ಕಾರ ಸ್ವಾಮ್ಯದ ಹಾಗೂ ಖಾಸಗಿ ಸಂಸ್ಥೆಗಳು ಸಹಾಯ ಹಸ್ತ ನೀಡಿದ್ದು, ಇವುಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.

ಜನರು ಸಹ ತಮ್ಮ ದೈನಂದಿನ ಅಗತ್ಯತೆ ವಸ್ತುಗಳನ್ನು ಖರೀದಿ ಮಾಡಲು ಅವಶ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ಅಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಕೋವಿಡ್ ಮಾರ್ಗಸೂಚಿ ಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು. ಶಾಸಕ ಸುನೀಲ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‌ಡೌನ್ ಮಾಡಬೇಕು ಎಂದ ಅವರು ಪ್ರತಿಯೊಂದು ಗ್ರಾಮ ಪಂಚಾಯತ್‌ಗಳಲ್ಲೂ ಕೋವಿಡ್ ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ಟ್ರೀಟ್‌ಮೆಂಟ್ ನಿಯಮವನ್ನು ತಪ್ಪದೇ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಕೊರೋನಾ ನಿರೋಧಕ ಚುಚ್ಚುಮದ್ದನ್ನು ಜಿಲ್ಲೆಯಲ್ಲಿ 2,75,064 ಜನರಿಗೆ ಒಂದನೇ ಡೋಸ್ ಲಸಿಕೆ ನೀಡಲಾಗಿದ್ದು, 87,360 ಜನರಿಗೆ 2ನೇ ಲಸಿಕೆ ನೀಡುವುದರೊಂದಿಗೆ ಶೇಕಡ 20.37 ಆಗಿದೆ. ಇದು ರಾಜ್ಯದಲ್ಲಿಯೇ ಹೆಚ್ಚು ಚುಚ್ಚುಮದ್ದು ನೀಡಿರುವ ಜಿಲ್ಲೆಯಾಗಿದ್ದು, ರಾಜ್ಯದಿಂದ ಹೆಚ್ಚುವರಿ ಕೋವಿಡ್ ಲಸಿಕೆ ಸರಬರಾಜು ಮಾಡಿದ್ದಲ್ಲಿ ಅವುಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕಾಪು ತಾಲೂಕಿನ ಕೊತ್ತಲ್‌ಕಟ್ಟೆ ಹಾಗೂ ಭರತ್ ನಗರಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆ ಅವುಗಳನ್ನು ಕಂಟೈನ್‌ಮೆoಟ್ ಝೋನ್‌ಗಳೆಂದು ಘೋಷಿಸುವುದರೊಂದಿಗೆ ಸೋಂಕು ಹರಡದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago