Featured

ಉಡುಪಿ: ಶಿವಮೊಗ್ಗ  ಹರ್ಷನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಹಣ ಸಹಾಯ ಮಾಡಿದ ಪೇಜಾವರ ಶ್ರೀಗಳು – Vishwanews24

ಉಡುಪಿ: ಶಿವಮೊಗ್ಗ  ಹರ್ಷನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಹಣ ಸಹಾಯ ಮಾಡಿದ ಪೇಜಾವರ ಶ್ರೀಗಳು – Vishwanews24

ಉಡುಪಿ: ಇತ್ತೀಚಿಗೆ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮಠದ ವತಿಯಿಂದ ಶುಕ್ರವಾರ ಹರ್ಷನ ಪಾಲಕರಿಗೆ 10 ಸಾವಿರ ರೂ. ಹಸ್ತಾಂತರಿಸಲಾಯಿತು. ಬಳಿಕ ಮಾತನಾಡಿದ ಶ್ರೀಗಳು, ಹರ್ಷನ ಅಗಲುವಿಕೆಯಿಂದ ಆತನ ಹೆತ್ತವರು ಅನುಭವಿಸುತ್ತಿರುವ ನೋವು ದುಃಖದಲ್ಲಿ ನಮಗೆ ಸಹಾನುಭೂತಿ ಇದೆ. ಇಂತಹ ಹೇಯಕೃತ್ಯಗಳ ಮೂಲಕ ನಮ್ಮ ಸಂಘಟನೆಗಳ ನೈತಿಕ ಸ್ಥೈರ್ಯ ಕುಗ್ಗಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇವೆ. ಸರ್ಕಾರ ಮತ್ತು ಕಾನೂನು ಹರ್ಷನ ಸಾವಿಗೆ ನ್ಯಾಯ ಕೊಡಿಸುತ್ತೆ ಎಂಬ ವಿಶ್ವಾಸದಲ್ಲಿದ್ದೇವೆ ಎಂದರು.

ಭಗವಂತನು ಈ ದುಃಖ ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ. ಸಮಾಜ, ಸಂಘ ಸಂಸ್ಥೆಗಳು, ಸಾಧು ಸಂತರು, ಸರ್ಕಾರ ಅನೇಕ ವಿಧದಲ್ಲಿ ಹರ್ಷನ ಪಾಲಕರಿಗೆ ಸಾಂತ್ವನ ನೀಡಿರುವುದನ್ನು ಕಂಡು ಸಮಾಧಾನವಾಗಿದೆ. ಇಂಥ ದುರ್ಘಟನೆಗಳು ಮುಂದೆ ನಡೆಯದಿರಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಗೋಸಾಯಿ ಮಠದ ಸ್ವಾಮೀಜಿ, ಶ್ರೀಗಳ ಆಪ್ತರಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್​ ಹಾಗೂ ಸಂಘಟನೆಗಳ ಪ್ರಮುಖರಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

1 hour ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

3 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

4 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

4 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

4 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

4 hours ago