ಉಡುಪಿ: ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್ ಎದುರಾಗಿದೆ.
ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುಕುಮಾರ್ ಶೆಟ್ಟಿ, ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಅದರಂತೆ ನನಗೆ ಸೀಟು ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದರು.
ಕೆಲವು ನಾಯಕರು ತನ್ನನ್ನ ಕಾಂಗ್ರೆಸ್ ಸೇರಲು ಹೇಳುತ್ತಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆಶಿ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…