Featured

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ – vishwanews24

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಇದೇ ನ. 7ರಂದು ಸಂಜೆ 4.30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ ಶೀರೂರು ಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಪರ್ಯಾಯ ಪೂರ್ವಭಾವಿ ಬಗ್ಗೆ ಪ್ರಮುಖರೊಂದಿಗೆ ಚರ್ಚೆ ನಡೆಯಲಿದೆ. ಈ ಬಾರಿಯ ಶೀರೂರು ಪರ್ಯಾಯ ನಮ್ಮ ಪರ್ಯಾಯ ಎಂಬ ಧ್ಯೇಯವಾಕ್ಯದೊಂದಿಗೆ ಉಡುಪಿ ಜಿಲ್ಲೆಯ ಪ್ರತಿ ಮನೆಗಳಿಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸಲಾಗುವುದು. ಅಲ್ಲದೆ, ಜಿಲ್ಲೆಯ ಪ್ರತಿಯೊಂದು ಮನೆಯವರು ಕೂಡಾ ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಈ ಬಾರಿ ವಿಶೇಷವಾಗಿ ಹೊರಕಾಣಿಕೆಯನ್ನು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದ್ದು, ಇದಕ್ಕಾಗಿ ಜಿಲ್ಲೆಯನ್ನು ಎಂಟು ವಲಯಗಳನ್ನಾಗಿ ಮಾಡಿ ಪ್ರತೀ ಮನೆಯಿಂದಲೂ ಹೊರಕಾಣಿಕೆಯನ್ನು ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಧರ್ಮಸ್ಥಳ, ಕಟೀಲು,ಮಂಗಳೂರು, ಪುತ್ತೂರು ವಲಯಗಳಿಂದ ದೊಡ್ಡ ಪ್ರಮಾಣದ ಹೊರಕಾಣಿಕೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಪರ್ಯಾಯ ಪೀಠಾರೋಹಣಗೈಯಲಿರುವ ಶೀರೂರು‌ ಶ್ರೀಗಳು ಜನವರಿ 9ರಂದು ಪುರಪ್ರವೇಶ ಮಾಡಲಿದ್ದು, ಅಂದು ಸಂಜೆ 3:30ಕ್ಕೆ ಉಡುಪಿಯ ಕಡಿಯಾಳಿಯಲ್ಲಿ ಶ್ರೀಗಳನ್ನು ಬರಮಾಡಿಕೊಂಡು, ಸಮಾಜದ ಪ್ರಮುಖರು, ಧಾರ್ಮಿಕ ಮುಖಂಡರನ್ನು ಒಳಗೊಂಡಂತೆ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ ಕರೆತರಲಾಗುವುದು. ಬಳಿಕ ಉಡುಪಿ ನಗರಸಭೆ ವತಿಯಿಂದ ಭಾವೀ ಪರ್ಯಾಯ ಶ್ರೀಗಳಿಗೆ ರಥಬೀದಿಯಲ್ಲಿ ಪೌರ ಸಮ್ಮಾನ ನಡೆಯಲಿದೆ. ಜನವರಿ10ರಿಂದ 17ರ ವರೆಗೆ ಪ್ರತಿದಿನ ಅದ್ದೂರಿಯ ಹೊರೆ ಕಾಣಿಕೆಯ ಮೆರವಣಿಗೆ ನಡೆಯಲಿದೆ. ಹೊರಕಾಣಿಕೆಯಲ್ಲಿ ಬಂದ ಎಲ್ಲಾ ಪರಿಕರಗಳನ್ನು ಶ್ರೀಮಠದ ವಾಹನ ನಿಲುಗಡೆ ಸಮೀಪ ( ರಾಜಾಂಗಣ ಪಾರ್ಕಿಂಗ್) ಅಚ್ಚುಕಟ್ಟಾಗಿ ಜೋಡಿಸಿ ಅಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಕಾರ್ಯದರ್ಶಿ ಮೋಹನ್ ಭಟ್, ಹೊರೆಕಾಣಿಕೆ ಸಂಚಾಲಕ ಸುಪ್ರಸಾದ ಶೆಟ್ಟಿ, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

8 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

8 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

8 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

9 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

10 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

10 hours ago