Featured

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ – vishwanews24

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಇದೇ ನ. 7ರಂದು ಸಂಜೆ 4.30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ ಶೀರೂರು ಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಪರ್ಯಾಯ ಪೂರ್ವಭಾವಿ ಬಗ್ಗೆ ಪ್ರಮುಖರೊಂದಿಗೆ ಚರ್ಚೆ ನಡೆಯಲಿದೆ. ಈ ಬಾರಿಯ ಶೀರೂರು ಪರ್ಯಾಯ ನಮ್ಮ ಪರ್ಯಾಯ ಎಂಬ ಧ್ಯೇಯವಾಕ್ಯದೊಂದಿಗೆ ಉಡುಪಿ ಜಿಲ್ಲೆಯ ಪ್ರತಿ ಮನೆಗಳಿಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸಲಾಗುವುದು. ಅಲ್ಲದೆ, ಜಿಲ್ಲೆಯ ಪ್ರತಿಯೊಂದು ಮನೆಯವರು ಕೂಡಾ ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಈ ಬಾರಿ ವಿಶೇಷವಾಗಿ ಹೊರಕಾಣಿಕೆಯನ್ನು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದ್ದು, ಇದಕ್ಕಾಗಿ ಜಿಲ್ಲೆಯನ್ನು ಎಂಟು ವಲಯಗಳನ್ನಾಗಿ ಮಾಡಿ ಪ್ರತೀ ಮನೆಯಿಂದಲೂ ಹೊರಕಾಣಿಕೆಯನ್ನು ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಧರ್ಮಸ್ಥಳ, ಕಟೀಲು,ಮಂಗಳೂರು, ಪುತ್ತೂರು ವಲಯಗಳಿಂದ ದೊಡ್ಡ ಪ್ರಮಾಣದ ಹೊರಕಾಣಿಕೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಪರ್ಯಾಯ ಪೀಠಾರೋಹಣಗೈಯಲಿರುವ ಶೀರೂರು‌ ಶ್ರೀಗಳು ಜನವರಿ 9ರಂದು ಪುರಪ್ರವೇಶ ಮಾಡಲಿದ್ದು, ಅಂದು ಸಂಜೆ 3:30ಕ್ಕೆ ಉಡುಪಿಯ ಕಡಿಯಾಳಿಯಲ್ಲಿ ಶ್ರೀಗಳನ್ನು ಬರಮಾಡಿಕೊಂಡು, ಸಮಾಜದ ಪ್ರಮುಖರು, ಧಾರ್ಮಿಕ ಮುಖಂಡರನ್ನು ಒಳಗೊಂಡಂತೆ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ ಕರೆತರಲಾಗುವುದು. ಬಳಿಕ ಉಡುಪಿ ನಗರಸಭೆ ವತಿಯಿಂದ ಭಾವೀ ಪರ್ಯಾಯ ಶ್ರೀಗಳಿಗೆ ರಥಬೀದಿಯಲ್ಲಿ ಪೌರ ಸಮ್ಮಾನ ನಡೆಯಲಿದೆ. ಜನವರಿ10ರಿಂದ 17ರ ವರೆಗೆ ಪ್ರತಿದಿನ ಅದ್ದೂರಿಯ ಹೊರೆ ಕಾಣಿಕೆಯ ಮೆರವಣಿಗೆ ನಡೆಯಲಿದೆ. ಹೊರಕಾಣಿಕೆಯಲ್ಲಿ ಬಂದ ಎಲ್ಲಾ ಪರಿಕರಗಳನ್ನು ಶ್ರೀಮಠದ ವಾಹನ ನಿಲುಗಡೆ ಸಮೀಪ ( ರಾಜಾಂಗಣ ಪಾರ್ಕಿಂಗ್) ಅಚ್ಚುಕಟ್ಟಾಗಿ ಜೋಡಿಸಿ ಅಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಕಾರ್ಯದರ್ಶಿ ಮೋಹನ್ ಭಟ್, ಹೊರೆಕಾಣಿಕೆ ಸಂಚಾಲಕ ಸುಪ್ರಸಾದ ಶೆಟ್ಟಿ, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

5 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

24 hours ago