Featured

ಉಡುಪಿ: ಶೋಭಾ ಕರಂದ್ಲಾಜೆ ಜೊತೆ  ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ: ಮಿಥುನ್ ರೈ

ಉಡುಪಿ: ಶೋಭಾ ಕರಂದ್ಲಾಜೆ ಜೊತೆ  ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..

ಎಲ್ಲಾ ಪೊಲೀಸ್ ಠಾಣೆಯಲ್ಲೂ ಕರಂದ್ಲಾಜೆ ನಾಪತ್ತೆ ದೂರು ದಾಖಲಿಸಿ, ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು..

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ..

ಕಾಂಗ್ರೆಸ್ ಯುವ ಮುಖಂಡ  ಮಿಥುನ್ ರೈ

ಉಡುಪಿ: ನವರಾತ್ರಿ ಹಬ್ಬ ಮುಗಿಯುವುದರ ಒಳಗಾಗಿ ಉಡುಪಿ, ಕಾಪು, ಕುಂದಾಪುರ ವ್ಯಾಪ್ತಿಯಲ್ಲಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಾಣಿಸಿಕೊಂಡರೆ ಸೆಲ್ಫಿ ತೆಗೆದು ಕಳುಹಿಸಿಕೊಡಿ. ಈ ರೀತಿ ಕಳುಹಿಸಿಕೊಟ್ಟ ಮೊದಲ ವಿಜೇತ 5 ಮಂದಿಗೆ ತಲಾ 5 ಸಾವಿರ ಬಹುಮಾನವಾಗಿ ನೀಡಲಾಗುವುದು. ಆ ಬಳಿಕವೂ ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದು ಹೇಳಿದರು.

ಅವರು ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್‌ನಿಂದ ಕರಾವಳಿ ಬೈಪಾಸ್‌ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ 5 ವರ್ಷ PFI ಸಂಘಟನೆ ನಿಷೇಧ : ಕೇಂದ್ರ ಸರಕಾರ ಆದೇಶ – Vishwanews24

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದೆ ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಗಾಂಧೀಜಿಯ ಮೂರು ಮಂಗನಂತೆ ರಘುಪತಿ ಭಟ್, ಶೋಭಾ ಕರಂದ್ಲಾಜೆ, ಸುನೀಲ್ ಕುಮಾರ್ ಬೊಮ್ಮಾಯಿಯ ಮಂಗಗಳು ಅವರು ಬೇಡವಾದುದ್ದನ್ನು ನೋಡುವುದು, ಕೇಳುವುದು ಮಾತನಾಡುವುದು ಇವರ ಕೆಲಸ ಎಂದು ವ್ಯಂಗ್ಯವಾಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಆನಂದಿ, ಅಣ್ಣಯ್ಯ ಶೇರಿಗಾರ್, ಪ್ರಶಾಂತ್ ಜತ್ತನ್ನ, ಪ್ರಶಾಂತ್ ಪೂಜಾರಿ, ಡಿಯೋನ್ ಡಿಸೋಜಾ, ಹಮ್ಮದ್ ಉಡುಪಿ, ಮೀನಾಕ್ಷಿ ಮಾಧವ ಬನ್ನಂಜೆ, ಫಾ.ವಿಲಿಯಂ ಮಾರ್ಟಿಸ್, ಗಣೇಶ್ ನೆರ್ಗಿ, ವೆರೋನಿಕಾ ಕರ್ನೇಲಿಯೋ, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವೆರಾ, ದಿನೇಶ್ ಪುತ್ರನ್, ಬಿ.ಕುಶಲ ಶೆಟ್ಟಿ, ಅಮೃತ್ ಶೆಣೈ, ಮೇರಿ ಡಿ’ಸೋಜಾ, ನಾರಾಯಣ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

ದೇಶದಲ್ಲಿ 5 ವರ್ಷ PFI ಸಂಘಟನೆ ನಿಷೇಧ : ಕೇಂದ್ರ ಸರಕಾರ ಆದೇಶ – Vishwanews24

Vishwa News 24

Recent Posts

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

18 minutes ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

35 minutes ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

43 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

57 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

15 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 day ago