Featured

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಕಾಲೇಜು ಆಡಳಿತ ಮಂಡಳಿ, 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು – Vishwanews24

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಕಾಲೇಜು ಆಡಳಿತ ಮಂಡಳಿ, 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಉಡುಪಿ,: ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.

ವಿವಾದವೇನು?

ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ಯುವತಿಯ ಚಿತ್ರೀಕರಣ ಮಾಡಲಾಗಿತ್ತು. ” ಕಾಲೇಜಿನ 3 ಮಂದಿ ವಿದ್ಯಾರ್ಥಿನಿಯರು ಕ್ಯಾಮರದ ಮೂಲಕ ಇನ್ನೊಬ್ಬ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಚಿತ್ರೀಕರಿಸಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ . ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago