Featured

ಉಡುಪಿ: ಶ್ರಾವಣ ಹುಣ್ಣಿಮೆ – ಇಂದು ಸೂಪರ್ ಮೂನ್‌ ದರ್ಶನ – vishwanews24

ಉಡುಪಿ: ಶ್ರಾವಣ ಹುಣ್ಣಿಮೆ – ಇಂದು ಸೂಪರ್ ಮೂನ್‌ನ ದರ್ಶನ

ಉಡುಪಿ: ಇಂದು ಶ್ರಾವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ (ಆ. 19) ಸೂಪರ್‌ ಮೂನ್‌. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವಿ‌àಜ ಹಾಗೂ ಕಾರ್ತಿಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ. ಸೂಪರ್‌ಮೂನ್‌ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು 30,000 ಕಿ.ಮೀ. ಸಮೀಪಕ್ಕೆ ಬರುವುದು.

ಭೂಮಿಯಿಂದ ಸರಾಸರಿ 3.84 ಲಕ್ಷ ಕಿ.ಮೀ. ದೂರದಲ್ಲಿ ದೀರ್ಘ‌ವೃತ್ತಾಕಾರದಲ್ಲಿ ಸುತ್ತುವ ಚಂದ್ರ, 28 ದಿನಗಳಿಗೊಮ್ಮೆ 3 ಲಕ್ಷದ 56 ಸಾವಿರ ಕಿ.ಮೀ. ವರೆಗೂ ಹತ್ತಿರ ಬರುವುದುಂಟು. ಆ ದಿನ ಹುಣ್ಣಿಮೆಯಾದರೆ ಭೂಮಿಗೆ ಹತ್ತಿರ ಬಂದ ಚಂದ್ರ ಸುಮಾರು 14 ಅಂಶ ದೊಡ್ಡದಾಗಿ ಕಂಡು ಸುಮಾರು 24 ಅಂಶ ಹೆಚ್ಚಿನ ಪ್ರಭೆಯಿಂದ ಬೆಳಗುತ್ತಾನೆ. ಈ ಅಂತರ ಆ. 19ರಂದು 3,61,969 ಕಿ.ಮೀ., ಸೆ. 18ರಂದು 3,57,485 ಕಿ.ಮೀ., ಅ. 17ರಂದು 3,57,363 ಕಿ.ಮೀ., ನ. 15ರಂದು 3,61,866 ಕಿ.ಮೀ. ಆಗಿರುತ್ತದೆ.

ವರ್ಷದಲ್ಲಿ ಕೆಲವು ಹುಣ್ಣಿಮೆಗಳು ಸೂಪರ್‌ ಮೂನ್‌ ಆಗುವುದುಂಟು. ಆದರೆ ಈ ವರ್ಷ ಈ ಹುಣ್ಣಿಮೆಯಿಂದ ಸರಾಗ ನಾಲ್ಕೂ ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ ಎಂದು ಖಗೋಳಶಾಸ್ತ್ರ ತಜ್ಞ ಡಾ| ಎ.ಪಿ. ಭಟ್‌ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago