ಉಡುಪಿ: ಇಂದು ಶ್ರಾವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ (ಆ. 19) ಸೂಪರ್ ಮೂನ್. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವಿàಜ ಹಾಗೂ ಕಾರ್ತಿಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್ಮೂನ್ಗಳೇ. ಸೂಪರ್ಮೂನ್ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು 30,000 ಕಿ.ಮೀ. ಸಮೀಪಕ್ಕೆ ಬರುವುದು.
ಭೂಮಿಯಿಂದ ಸರಾಸರಿ 3.84 ಲಕ್ಷ ಕಿ.ಮೀ. ದೂರದಲ್ಲಿ ದೀರ್ಘವೃತ್ತಾಕಾರದಲ್ಲಿ ಸುತ್ತುವ ಚಂದ್ರ, 28 ದಿನಗಳಿಗೊಮ್ಮೆ 3 ಲಕ್ಷದ 56 ಸಾವಿರ ಕಿ.ಮೀ. ವರೆಗೂ ಹತ್ತಿರ ಬರುವುದುಂಟು. ಆ ದಿನ ಹುಣ್ಣಿಮೆಯಾದರೆ ಭೂಮಿಗೆ ಹತ್ತಿರ ಬಂದ ಚಂದ್ರ ಸುಮಾರು 14 ಅಂಶ ದೊಡ್ಡದಾಗಿ ಕಂಡು ಸುಮಾರು 24 ಅಂಶ ಹೆಚ್ಚಿನ ಪ್ರಭೆಯಿಂದ ಬೆಳಗುತ್ತಾನೆ. ಈ ಅಂತರ ಆ. 19ರಂದು 3,61,969 ಕಿ.ಮೀ., ಸೆ. 18ರಂದು 3,57,485 ಕಿ.ಮೀ., ಅ. 17ರಂದು 3,57,363 ಕಿ.ಮೀ., ನ. 15ರಂದು 3,61,866 ಕಿ.ಮೀ. ಆಗಿರುತ್ತದೆ.
ವರ್ಷದಲ್ಲಿ ಕೆಲವು ಹುಣ್ಣಿಮೆಗಳು ಸೂಪರ್ ಮೂನ್ ಆಗುವುದುಂಟು. ಆದರೆ ಈ ವರ್ಷ ಈ ಹುಣ್ಣಿಮೆಯಿಂದ ಸರಾಗ ನಾಲ್ಕೂ ಹುಣ್ಣಿಮೆಗಳೂ ಸೂಪರ್ಮೂನ್ಗಳೇ ಎಂದು ಖಗೋಳಶಾಸ್ತ್ರ ತಜ್ಞ ಡಾ| ಎ.ಪಿ. ಭಟ್ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…