Featured

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ – vishwanews24

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ

ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶ್ರಮ ಸ್ವೀಕಾರ, ಪೀಠಾರೋಹಣದ ಸುವರ್ಣ ಮಹೋತ್ಸವದ ನೆನಪಿಗಾಗಿ ಅನ್ನಬ್ರಹ್ಮ, ಉತ್ಸವ ಬ್ರಹ್ಮನಾದ ಉಡುಪಿ ಶ್ರೀಕೃಷ್ಣನಿಗೆ ‘ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ’ ಕಾರ್ಯಕ್ರಮ ಇದೇ ಡಿ.27ರಂದು ನಡೆಯಲಿದೆ.

ಈ ಕುರಿತು ಉಡುಪಿ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು, ಡಿ.26ರಂದು ಮಧ್ಯಾಹ್ನ 3.30ಕ್ಕೆ ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ಸುವರ್ಣ ರಥದ ವೈಭವದ ಶೋಭಾಯಾತ್ರೆ ನಡೆಯಲಿದ್ದು, ಮಂತ್ರಾಲಯ ಮಠದ ಸುಬುಧೇಂದ್ರ ತೀರ್ಥ ಶ್ರೀಪಾದರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ರಾಜಾಂಗಣದಲ್ಲಿ ಧರ್ಮ ಸಭೆ ನಡೆಯಲಿದೆ.

ಡಿ. 27ರಂದು ಸಂಜೆ 6ಗಂಟೆಗೆ ರಥಬೀದಿಯಲ್ಲಿ ಪಾರ್ಥಸಾರಥಿ ಸ್ವರ್ಣರಥದಲ್ಲಿ ಶ್ರೀಕೃಷ್ಣನ ಉತ್ಸವಕ್ಕೆ ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದಾರೆ. ಮಂತ್ರಾಲಯದ ಸುಬುಧೇಂದ್ರ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭಂಡಾರಕೇರಿ ಮಠದ ವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಳ್ಳಲಿದ್ದಾರೆ ಎಂದರು.

ಡಿ. 28ಕ್ಕೆ ಕೋಟಿ ತುಳಸಿ ಅರ್ಚನೆ:
ಉಡುಪಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಶ್ರೀಕಾಂತ್​ ಉಪಾಧ್ಯಾಯ ಮಾತನಾಡಿ, ಡಿ.28ರಂದು ಬೆಳಿಗ್ಗೆ 9 ಗಂಟೆಗೆ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿ 26 ವಲಯಗಳ ಸುಮಾರು 2000 ವಿಪ್ರ ಬಾಂಧವರೊಂದಿಗೆ ಕೋಟಿ ತುಳಸಿ ಅರ್ಚನೆ ನಡೆಯಲಿದೆ. ಬೆಂಗಳೂರು, ಮೈಸೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ತುಳಸಿಯನ್ನು ತರಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಮಠ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಬ್ರಾಹ್ಮಣ ಸಭಾದ ಶ್ರೀನಿವಾಸ ಬಲ್ಲಾಳ್​, ರಾಜೇಂದ್ರ, ನಾಗರಾಜ ಉಪಾಧ್ಯಾಯ, ಹಯವದನ ಭಟ್​ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago