ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ ಮೆರವಣಿಗೆ ಮೂಲಕ ರಥವನ್ನು ರಾಜಾಂಗಣಕ್ಕೆ ತರಲಾಯಿತು.
ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೈಭವದ ಮೆರವಣಿಗೆಯಲ್ಲಿ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳು, ಸಂಸ್ಕೃತ ಕಾಲೇಜು ತಂಡದಿಂದ ವೇದಘೋಷ, ಬಿರುದಾವಳಿ, ವಿವಿಧ ಬಗೆಯ ಆಕರ್ಷಕ ಸ್ತಬ್ಧ ಚಿತ್ರಗಳು, ವಿವಿಧ ಬಗೆಯ ಆಕರ್ಷಕ ವೇಷಗಳು, ನಾಸಿಕ್ ಬ್ಯಾಂಡ್ ಸೇರಿದಂತೆ ವಿವಿಧ ಬಗೆಯ ವಾದ್ಯ ತಂಡಗಳು, ಭಜನಾ ತಂಡಗಳು ಪಾಲ್ಗೊಂಡಿದ್ದರು.
ನಂತರ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀಗಳು ಹಾಗೂ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಕ್ಕೆ ಪುಷ್ಪಾರ್ಚನೆ ಮಾಡಿ ಆರತಿ ಬೆಳಗಿಸಿ ಶ್ರೀ ಕೃಷ್ಣನಿಗೆ ರಥವನ್ನು ಸಮರ್ಪಿಸಿದರು. ನಂತರ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…