Featured

ಉಡುಪಿ ಶ್ರೀಕೃಷ್ಣಮಠದಲ್ಲಿ ಅ. 24ರಿಂದ 26ರ ವರೆಗೆ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ – vishwanews24

ಉಡುಪಿ ಶ್ರೀಕೃಷ್ಣಮಠದಲ್ಲಿ ಅ. 24ರಿಂದ 26ರ ವರೆಗೆ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.

ಉಡುಪಿ ಕೃಷ್ಣಮಠದ ಗೀತಾಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿದೇಶಗಳ ಸುಮಾರು 2000ಕ್ಕೂ ಅಧಿಕ ವಿದ್ವಾಂಸರು ಸಮ್ಮೇಳನದಲ್ಲಿ ವಿದ್ವತ್ತೂರ್ಣ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತಿರ್ಥ ಶ್ರೀಪಾದರು, ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು, ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನತಿರ್ಥ ಶ್ರೀಪಾದರು, ಹರಿದ್ವಾರದ ಪತಂಜಲಿ ಯೋಗಪೀಠ ಟ್ರಸ್ಟ್​ನ ಸ್ವಾಮಿ ಬಾಬಾ ರಾಮದೇವ್​ ಜೀ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಆಲ್​ ಇಂಡಿಯಾ ಓರಿಯಂಟಲ್​ ಕಾನ್ಫರೆನ್ಸ್​ ಕಾರ್ಯದರ್ಶಿ ಡಾ. ಶಿವಾನಿ ವಿ. ಮಾತನಾಡಿ, ಅಷ್ಟಮಠಗಳ ಆವರಣ, ಸಂಸತ ಕಾಲೇಜು ಮುಂತಾದ ಸ್ಥಳಗಳಲ್ಲಿ ಏಕಕಾಲದಲ್ಲಿ ಶಿಕ್ಷಣ, ಬಾಲಸಾಹಿತ್ಯ, ಕನ್ನಡ, ಸಂಸತ, ಪಾಲಿ, ಉರ್ದು, ಯೋಗ, ಆಯುರ್ವೇದ ಮುಂತಾಗಿ ಒಟ್ಟು 23 ವಿಷಯಗಳಲ್ಲಿ ಪ್ರತ್ಯೇಕ ವಿಚಾರಸಂಕಿರಣಗಳು ನಡೆಯಲಿವೆ. ಬಾಬಾ ರಾಮದೇವ ಜಿ ಹಾಗೂ ಆಚಾರ್ಯ ಬಾಲಕೃಷ್ಣ ಜಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ಮುಂಜಾನೆ 6ರಿಂದ 7ರ ವರೆಗೆ ಯೋಗ-ಧ್ಯಾನಾದಿ ತರಗತಿಗಳು ನಡೆಯುತ್ತವೆ. ಕರ್ನಾಟಕದ ಪ್ರಸಿದ್ಧ ಅಭಿನವ ನೃತ್ಯ ಅಕಾಡೆಮಿಯಿಂದ ’ತದ್ಭಾರತಂ’ ನೃತ್ಯ ಹಾಗೂ ಉಡುಪಿ ಕಲಾವಿದರಿಂದ ‘ಯಕ್ಷನೃತ್ಯ’ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಠದ ದಿವಾನರಾದ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಎಐಒಸಿ ಕಾರ್ಯದರ್ಶಿ ಡಾ. ಶ್ರುತಿ ರಾವ್​, ವಿದ್ವಾಂಸರಾದ ಭಾಸ್ಕರ ಜೋಶಿ, ವೇದೇಶ ಆಚಾರ್ಯ, ಷಣ್ಮುಖ ಹೆಬ್ಬಾರ್​ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

17 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

17 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

18 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

20 hours ago