ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ಇಂದಿನಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ.
ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಚಾಲ್ತಿಯಲ್ಲಿರಲಿದ್ದು, ಮಹಿಳೆಯರು ಸಭ್ಯ ಉಡುಪುಗಳನ್ನು ಧರಿಸಬೇಕು. ಜೀನ್ಸ್ ಪ್ಯಾಂಟ್, ಟಿ ಶರ್ಟ್ ಸ್ಟೀವ್ ಲೆಸ್ ಉಡುಪುಗಳನ್ನು ಧರಿಸಿ ಬರುವ ಮಹಿಳೆಯರು ಹಾಗು ಪುರುಷರಿಗೆ ಪ್ರವೇಶವಿಲ್ಲ. ಹಾಗೆಯೇ ಪುರುಷ ಭಕ್ತರು ದೇವಳದ ಒಳಗಡೆ ಪ್ರವೇಶಿಸುವ ಮೊದಲು ಅಂಗಿ ತೆಗೆಯಬೇಕು ಎಂಬ ನಿಯಮ ಮಾಡಲಾಗಿದೆ.
ಈ ಹಿಂದೆ ಕೃಷ್ಣಮಠಕ್ಕೆ ಬೆಳಿಗ್ಗೆ 11 ಗಂಟೆ ಒಳಗಡೆ ಬೆಳಗ್ಗಿನ ಮಹಾಪೂಜೆ ಗೆ ಆಗಮಿಸುವ ಭಕ್ತರು ಅಂಗಿ ಧರಿಸಬಾರದು ಎಂಬ ನಿಯಮವಿತ್ತು. ಆದರೆ ಇನ್ನು ಮುಂದೆ ಯಾವುದೇ ಸಮಯದಲ್ಲೂ ದೇವಳಕ್ಕೆ ಆಗಮಿಸುವ ಸಂದರ್ಭದಲ್ಲಿ ಈ ನಿಯಮ ಜಾರಿಯಲ್ಲಿರಲಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…