ಉಡುಪಿ, : ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದು ಬೆಳಗ್ಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ.
ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸಿ, ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು.
ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಲೇಪನ ಮಾಡಿಸಲಾಗುತ್ತಿದ್ದು, ಚಿನ್ನದ ತಗಡನ್ನು ಮಾಡಲು ರಾಜಕೋಟ್ ನಿಂದ ತರಿಸಿದ ನೂತನ ರೋಲಿಂಗ್ ಯಂತ್ರಕ್ಕೆ ಸ್ವಿಚ್ ಹಾಕುವುದರೊಂದಿಗೆ ಪುನೀತ್ ರಾಜ್ಕುಮಾರ್ ಚಾಲನೆ ನೀಡಿದರು. ಹಾಗೆಯೇ ಶ್ರೀ ಕೃಷ್ಣನ ದರ್ಶನ ಪಡೆದ ಬಳಿಕ ಪರ್ಯಾಯ ಪಲಿಮಾರು ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಸುವರ್ಣ ಗೋಪುರದ ಮಾದರಿಯನ್ನು ಉದ್ಘಾಟಿಸಿದರು.
ಈ ಸಂದರ್ಭ ಕಡಗೋಲು ಕೃಷ್ಣ, ಮುಖ್ಯಪ್ರಾಣರ ದರ್ಶನ ಮಾಡಿದ ಪುನೀತ್ ,ಈ ಹಿಂದೆ ಅಪ್ಪಾಜಿ ಜೊತೆ ಹಲವು ಬಾರಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದೆ. ಆ ದಿನಗಳು ಯಾವತ್ತಿಗೂ ಮರೆಯಲಾಗದು ಎಂದು ತಂದೆ ಜೊತೆ ಕೃಷ್ಣ ಮಠಕ್ಕೆ ಆಗಮಿಸಿದ ದಿನಗಳನ್ನು ನೆನೆಪಿಸಿಕೊಂಡರು.
ತನ್ನ ನೂತನ ಚಲನಚಿತ್ರ ‘ನಟಸಾರ್ವಭೌಮ’ವನ್ನು ಗೆಲ್ಲಿಸಿದ್ದಕ್ಕೆ ಕನ್ನಡ ಪ್ರೇಕ್ಷಕರಿಗೆ ಪುನೀತ್ ಕೃತಜ್ಞತೆ ಸಲ್ಲಿಸಿದರು.
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…